ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ರಾಜ್ಯ ರಾಜಕೀಯದಲ್ಲಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಬಿಸಿಬಿಸಿ ಸುದ್ಧಿ ಎಂದು ಚರ್ಚೆಯಾಗುತ್ತಿದ್ದು,ಇದರ ಬಗ್ಗೆ ಗೃಹ ಸಚಿವರು ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರು ಆರೋಪ ಮಾಡಿದರೂ ಕೂಡ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲೇಬೇಕಾಗುತ್ತದೆ ಎಂದು ಹೇಳಿದ್ದಾರೆ. ಸಂತ್ರಸ್ತರಿಗೆ ಭಯ ಹುಟ್ಟಿಸಿದರೇ ಅವರಿಗೆ ನಾವು ಭದ್ರತೆ ನೀಡುತ್ತೇವೆ ಎಂದರು.

ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಿದ್ದೇವೆ. ತನಿಖಾ ತಂಡದಲ್ಲಿ ಎಸ್​ಪಿ ಮಟ್ಟದ ಅಧಿಕಾರಿಗಳು ಇದ್ದಾರೆ. ಎಸ್​​ಐಟಿ ಅಧಿಕಾರಿಗಳ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತೆ. ಅಧಿಕಾರಿಗಳು ಪೆನ್​ಡ್ರೈವ್, ಸಾಕ್ಷಿ ಎಲ್ಲವನ್ನೂ ಕಲೆ ಹಾಕುತ್ತಿದ್ದಾರೆ. ವಿದೇಶದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ. ಎಸ್​​ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಲ್ಲ ವಿಡಿಯೋಗಳನ್ನು ಎಫ್​ಎಸ್​ಲ್​​ಗೆ ಕಳುಹಿಸುತ್ತೇವೆ ಎಂದು ಹೇಳಿದರು.

ಹಾಸನ ಜಿಲ್ಲೆಯ ಹಲವು ಮಹಿಳೆಯರ ಜೊತೆಗಿನ ಅಶ್ಲೀಲ ವೀಡಿಯೋ ಚಿತ್ರೀಕರಿಸಿದ ಪ್ರಭಾವಿ ವ್ಯಕ್ತಿಯನ್ನು ಬಂಧಿಸುವಂತೆ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ಆಗ್ರಹಿಸಿದೆ. ಅಲ್ಲದೆ ಪೆನ್​​ಡ್ರೈವ್ ಮೂಲಕ ಮಹಿಳೆಯರ ಅಶ್ಲೀಲ ವೀಡಿಯೋ ಹಂಚಿ ಅವರ ಖಾಸಗಿ ಜೀವನಕ್ಕೆ ಧಕ್ಕೆ ತಂದವರ ವಿರುದ್ಧವೂ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳು, ಜನಪರ, ದಲಿತ, ಮಹಿಳಾ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಲಿವೆ.

 

Related