ರಾಜ್ಯಕ್ಕೆ ಆಗಮಿಸುತ್ತಿರುವ ಮೋದಿ ಮಾಸ್ಟರ್ ಪ್ಲಾನ್ ಏನು?

ರಾಜ್ಯಕ್ಕೆ ಆಗಮಿಸುತ್ತಿರುವ ಮೋದಿ ಮಾಸ್ಟರ್ ಪ್ಲಾನ್ ಏನು?

ಬೆಂಗಳೂರು: ಲೋಕಸಭಾ ಚುನಾವಣೆಯ ಅಕಾಡ ದಿನದಿಂದ ದಿನಕ್ಕೆ ರಂಗೆರುತ್ತಿದ್ದು, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರವನ್ನು ಕೈಗೊಂಡಿದ್ದು, ಇನ್ನೂ ಬಿಜೆಪಿ ಪಕ್ಷದ ಅಭ್ಯರ್ಥಿ ಬಲಪಡಿಸಲೆಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಿ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.

ಇನ್ನು ಕಳೆದ ಬಾರಿ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮೋದಿಯವರು ರೋಡ್ ಶೋ ಮಾಡಿದರು ಕೂಡ ಜನರು ಬಿಜೆಪಿ ಪಕ್ಷವನ್ನು ಕೈಹಿಡಿಯಲಿಲ್ಲ. ಆದರೆ ಈ ಬಾರಿ ಲೋಕಸಭಾ ಚುನಾವಣೆಗೆ ಬಿಜೆಪಿಯ ಮಾಸ್ಟರ್ ಪ್ಲಾನ್ ನ ಬೇರೆಯಾಗಿದೆ ಎಂದು ತಿಳಿದು ಬಂದಿದೆ.

ಕಳೆದ ಬಾರಿ ಕರ್ನಾಟಕ ರಾಜ್ಯದಲ್ಲಿ ರೋಡ್ ಶೋ ಮಾಡುವಾಗ ಹೆಚ್ಚಿನ ಜನಸಂಖ್ಯೆಯನ್ನು ಮೋದಿಯವರನ್ನು ನೋಡಲು ಅವಕಾಶ ನೀಡಲಿಲ್ಲ. ಆದರೆ ಈ ಬಾರಿ ಮೋದಿ ರೋಡ್ ಶೋ ವೇಳೆ ಹೆಚ್ಚು ಜನರು ಮೋದಿಯನ್ನು ನೋಡಲು ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.

ಹೌದು, ದೇಶದ ಪ್ರಧಾನಿಯನ್ನು ನೋಡುವುದೆಂದರೆ ಸುಮ್ಮನೆ? ನರೇಂದ್ರ ಮೋದಿ ಮುಖ ನೋಡಿದರೂ ಬಿಜೆಪಿ ಪಕ್ಷಕ್ಕೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತದಾರರು ಮತ ನೀಡಬಹುದು ಎಂಬ ಕಾರಣಕ್ಕೆ ಈ ಬಾರಿ ಮೋದಿ ರೋಡ್ ಶೋ ವೇಳೆ ಹೆಚ್ಚಿನ ಜನಸಂಖ್ಯೆಗೆ ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.

 

Related