ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರಕ್ಕೆ ಬಂದರೆ ನನಗೆ ಪಕ್ಷಗಳು ನಗಣ್ಯ: ಯತ್ನಾಳ್

ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರಕ್ಕೆ ಬಂದರೆ ನನಗೆ ಪಕ್ಷಗಳು ನಗಣ್ಯ: ಯತ್ನಾಳ್

ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿ ಎರಡು ವಾರ ತುಂಬುತ್ತಾ ಬಂದಿದೆ. ಇಂದು ಸದನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಧ್ವನಿ ಎತ್ತಿದ್ದಾರೆ.

ಉತ್ತರ ಕರ್ನಾಟಕ ದ ಸಮಸ್ಯೆ ಬಗ್ಗೆ ಸ್ಪಂದಿಸಿದೆ ಹೋದರೆ ನನಗೆ ಯಾವ ಪಕ್ಷವೂ ಲೇಖಕಿಲ್ಲ. ನನಗೆ ಉತ್ತರ ಕರ್ನಾಟಕ ಅಭಿವೃದ್ಧಿಯ ಮುಖ್ಯ ಎಂದು ಹೇಳಿದರು.

ಹೌದು, ಯತ್ನಾಳ್ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಬಹಳ ಕಳಕಳಿಯಿಂದ ಮಾತಾಡುತ್ತಲೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾಲೆಳೆದರು. ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪ ಮಾಡುವವನನ್ನು ತುಳಿದು ಬಿಡುವ ಪ್ರಯತ್ನ ನಡೆಯುತ್ತದೆ, ಅವನನ್ನು ಮೂಲೆಗುಂಪು ಮಾಡಲಾಗುತ್ತದೆ, ಉತ್ತರ ಕರ್ನಾಟಕದ ಒಬ್ಬ ಶಾಸಕ ಜನಪ್ರಿಯನಾಗುವ ಅವಕಾಶವೇ ಇಲ್ಲ ಎಂದು ಬಸನಗೌಡ ಯತ್ನಾಳ್ ಹೇಳಿದರು.

 

Related