ಸಿಟಿ ರವಿಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ಯಾಕೆ..?

ಸಿಟಿ ರವಿಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ಯಾಕೆ..?

ಕಲಬುರಗಿ: ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಜನರು ನಿಮ್ಮನ್ನು ತಿರಾಕರಿಸಿದ್ದಾರೆ ಎಂದು ಮಾಜಿ ಸಚಿವ ಸಿಟಿ ರವಿ ಅವರ ವಿರುದ್ಧ ಐಟಿವಿಟಿ ಸಚಿವರಾಗಿರುವಂತಹ ಪ್ರಿಯಾಂಕ್‌ ಖರ್ಗೆ ಅವರು ತಿರುಗೇಟು ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಚಿಕ್ಕಮಗಳೂರಿನ ಜನ ನಿಮ್ಮನ್ನು ತಿರಸ್ಕರಿಸಿದ್ದಾರೆ. ಪಕ್ಷದಲ್ಲಿಯೂ ಯಾವುದೇ ಹುದ್ದೆ ಹೊಂದಿಲ್ಲ. ರವಿ ಅವರೇ ನಮ್ಮ ಸೆಟಲ್ ಬಗ್ಗೆ ಯೋಚಿಸದೆ ನೀವು ಸೆಟಲ್ ಆಗುವ ಬಗ್ಗೆ ಯೋಚಿಸಿ ಎಂದು ಸಿ.ಟಿ.ರವಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

ಪ್ರಿಯಾಂಕ್ ಖರ್ಗೆ ಸೆಟಲ್ ಆಗಿದ್ದಾರೆ. ಈಗ ಅಳಿಯನನ್ನು ಸೆಟಲ್ ಮಾಡಲು ಖರ್ಗೆ ಅವರು‌ ಕಣ್ಣೀರು ಹಾಕಿದ್ದಾರೆ ಎಂದು ಸಿ.ಟಿ‌ ರವಿ ಹೇಳಿರುವುದಕ್ಕೆ ಇಂದು(ಮಂಗಳವಾರ) ಪ್ರತಿಕ್ರಿಯೆ ನೀಡಿದ ಪ್ರಿಯಾಂಕ್ ಖರ್ಗೆ ಅವರು, ಯಡಿಯೂರಪ್ಪ ಹಾಗೂ ಅವರ ಮಗನಿಂದ ಬಿಜೆಪಿಯನ್ನು ಸ್ವಚ್ಛಗೊಳಿಸಲು ಹೋರಾಡುವುದಾಗಿ ಯತ್ನಾಳ ಹಾಗೂ ಈಶ್ವರಪ್ಪ ಹೇಳುತ್ತಿದ್ದಾರೆ. ಅವರನ್ನು ನೋಡಿ, ಅವರಂತೆ ಮಾತನಾಡುವುದನ್ನು ಕಲಿಯಿರಿ. ಮೊದಲೇ ಜನರು ನಿಮ್ಮನ್ನು ಪುಕ್ಕಲ ಎನ್ನುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.

ತೇಜಸ್ವಿ ಸೂರ್ಯ ಹಾಗೂ ಜಗದೀಶ್ ಶೆಟ್ಟರ್ ಬದಲು ಸಾಮಾನ್ಯ ಬ್ರಾಹ್ಮಣ, ಲಿಂಗಾಯತನಿಗೆ ಟಿಕೆಟು ಕೊಡಬೇಕಿತ್ತಲ್ಲ. ಇನ್ನೂ‌ ಚುನಾವಣೆಗೆ ಪ್ರಚಾರ ಕೊನೆಗೊಳ್ಳಲು ಐದು ಆರು‌ ದಿನವಿದೆ. ಬಿಜೆಪಿ ನಾಯಕರು ನಮ್ಮ ಹಾಗೂ ನಮ್ಮ ಕುಟುಂಬದ ಮೇಲೆ ಹೀಗೆ ವೈಯಕ್ತಿಕ ದಾಳಿ ಮಾಡುತ್ತಾರೆ. ನಾವೂ ಕೂಡ ಅಂತಹ ಮಾತುಗಳಿಗೆ ಸೂಕ್ತ ಉತ್ತರ ಕೊಡಬೇಕಾಗುತ್ತದೆ ಎಂದು ಮಾರುತ್ತರ ನೀಡಿದರು.

 

Related