ಸಕ್ಕರೆ ಸಚಿವರ ವಿರುದ್ಧ ಯತ್ನಾಳ್ ಆರೋಪ ಮಾಡಿದ್ಯಾಕೆ?

ಸಕ್ಕರೆ ಸಚಿವರ ವಿರುದ್ಧ ಯತ್ನಾಳ್ ಆರೋಪ ಮಾಡಿದ್ಯಾಕೆ?

ಅಥಣಿ: ಈ ಬಾರಿ ಲೋಕಸಭಾ ಚುನಾವಣೆಗೆ ಪ್ರತಿ ಸಕ್ಕರೆ ಕಾರ್ಖಾನೆ ಮಾಲೀಕರಿಂದ ಸಕ್ಕರೆ ಸಚಿವರಾಗಿರುವಂತಹ ಶಿವಾನಂದ್ ಪಾಟೀಲ್ ಅವರು 50 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪವನ್ನು ಬಿಜೆಪಿ ಶಾಸಕ ಬಸವರಾಜ ಯತ್ನಾಳ್ ಪಾಟೀಲ್ ಅವರು ಮಾಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಸಕ್ಕರೆ ಕಾರ್ಖಾನೆ ಮಾಲೀಕರಿಂದ ಕಾಂಗ್ರೆಸ್ ಪಕ್ಷ ಸುಮಾರು 50 ಲಕ್ಷ ಹಣ ಬೇಡಿಕೆ ಇಟ್ಟಿದೆ ಎಂದು ಹೇಳಿದ್ದಾರೆ.

ತೂಕದ ಯಂತ್ರದ ಬಗ್ಗೆ ಸಚಿವರು ವಿಧಾನಸಭೆಯಲ್ಲೇ ಹೇಳಿದ್ದರು. ಆದರೆ, ಈಗ ಅವರ ಪುತ್ರಿ ಚುನಾವಣೆಗೆ ನಿಂತಿರುವ ಕಾರಣ ಮಾತು ಬದಲಿಸಿ, ಕಾರ್ಖಾನೆಗಳಿಂದ 50 ಲಕ್ಷ ವಸೂಲಿ ಮಾಡುತ್ತಿದ್ದಾರೆ.

ಕಾರ್ಖಾನೆ ಮಾಲೀಕರಿಂದ ತಲಾ 50 ಲಕ್ಷ ರೂ.ಗಳನ್ನು ಪಡೆದುಕೊಳ್ಳಲು ‘ಏಜೆಂಟ’ರನ್ನು ನೇಮಿಸಿದ್ದಾರೆ. 50 ಲಕ್ಷ ರೂಪಾಯಿ ಕೋರಿ ‘ಏಜೆಂಟ್’ ಒಬ್ಬ ನನ್ನನ್ನು ಸಂಪರ್ಕಿಸಿದ್ದ. ಆದರೆ ನಾನು ಹಣ ನೀಡಲು ನಿರಾಕರಿಸಿ 10 ತೂಕದ ಯಂತ್ರಗಳನ್ನು ನನ್ನ ಕಾರ್ಖಾನೆಗೆ ಅಳವಡಿಸುವಂತೆ ಹೇಳಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ.

 

 

Related