ಮತ್ತೆ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಮೋಹಕ ತಾರೆ?

ಮತ್ತೆ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಮೋಹಕ ತಾರೆ?

ಮಂಡ್ಯ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳು ಘಟಾನುಘಟಿಗಳಾಗಿದ್ದು, ಯಾರಿಗೆ ಟಿಕೆಟ್ ಸಿಗುತ್ತೆ ಎಂದು ಎಲ್ಲರ ಚಿತ್ತ ಮಂಡ್ಯದತ್ತ ಎಂಬಂತ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿದೆ.

ಕಳೆದ ಬಾರಿಯಂತೆ ಈ ಬಾರಿ ಕೂಡ ಜಿದ್ದಾಜಿದ್ದಿನ ಅಖಾಡವಾಗಿ ಮಂಡ್ಯ ಏರ್ಪಡುತ್ತಿದೆ. ಕಳೆದ ಬಾರಿ ರಾಜ್ಯವೇ ತಿರುಗಿ‌ ನೋಡುವಂತೆ ಮಂಡ್ಯ ಚುನಾವಣೆ ಮಾಡಿತ್ತು. HDK ಪುತ್ರ ನಿಖಿಲ್ ಮತ್ತು ಸುಮಲತಾ ಅಂಬರೀಶ್ ನಡುವೆ ಬಿಗ್ ಫೈಟ್ ನಡೆದಿತ್ತು.

ಇನ್ನು ಮೋಹಕತಾರೆ ಮಾಜಿ ಸಂಸದೆ ರಮ್ಯಾ ಮತ್ತೆ ಲೋಕಸಭಾ ಅಖಾಡಕ್ಕೆ ಎಂಟ್ರಿ ಕೊಡ್ತಾರ ಎಂದು ಈಗಾಗಲೇ ರಾಜ್ಯ ರಾಜಕೀಯದಲ್ಲಿ ಗುಸುಗುಸು ಶುರುವಾಗಿದ್ದು, ಮತ್ತೆ ಮಂಡ್ಯ ಕ್ಷೇತ್ರದಿಂದ ನಟಿ ರಮ್ಯಾ ಅವರಿಗೆ ಲೋಕಸಭಾ ಟಿಕೆಟ್ ಸಿಗುತ್ತಾ ಎಂದು ರಮ್ಯಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಇಂದು ಮಂಡ್ಯ ಶಾಸಕ ರವಿಕುಮಾರ್ ಗೌಡ, ನಟಿ ರಮ್ಯಾ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಹಿತಿಯನ್ನು ನೀಡಿದ್ದಾರೆ.

ಮಾಜಿ ಸಿಎಂ ಎಸ್​​ಎಂ ಕೃಷ್ಣ ಅವರ ಪುತ್ರಿ ಶಾಂಭವಿ ಸೇರಿದಂತೆ ಹಲವರು ಮಂಡ್ಯದಿಂದ ಸ್ಪರ್ಧಿಸಲು ಉತ್ಸಾಹ ತೋರಿದ್ದಾರೆ. ನಟಿ ರಮ್ಯಾ ಕೂಡ ಮಂಡ್ಯದಲ್ಲಿ ಸ್ಪರ್ಧೆ ಮಾಡ್ತಿನಿ‌ ಅಂತಿದ್ದಾರೆ. ನಮ್ಮಲ್ಲಿ ಅಭ್ಯರ್ಥಿಗಳಿಗೆ ಕೊರತೆ ಇಲ್ಲ ಎಂದು ಶಾಸಕ ರವಿಕುಮಾರ್ ಗೌಡ ಹೇಳಿದ್ದಾರೆ. ರಮ್ಯಾ ಮಂಡ್ಯದಿಂದ ಸ್ಪರ್ಧೆ ಮಾಡಿದ್ರೆ ನನ್ನ ಸಂಪೂರ್ಣ ಬೆಂಬಲ ಅವರಿಗೆ ಕೊಡುವೆ ಎಂದರು.

ಈ ಬಾರಿ ಕಾಂಗ್ರೆಸ್​ನಿಂದ ರಮ್ಯಾ ಮತ್ತು ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದ್ರೆ ಮತ್ತೆ ಮಂಡ್ಯ ಮತ್ತೆ ಹೈವೋಲ್ಟೇಜ್ ಕ್ಷೇತ್ರವಾಗೋದು ಫಿಕ್ಸ್.

ಸುಮಲತಾ ಪಕ್ಷೇತರರಾಗಿ ಸ್ಪರ್ಧಿಸಿದ್ರೆ ಮಂಡ್ಯದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡೋದು ಖಂಡಿತ. ಮೂವರು ಸಿನಿಮಾ ಹಿನ್ನೆಲೆ ಜೊತೆ ರಾಜಕೀಯವಾಗಿ ಪ್ರಬಲವಾಗಿದ್ದಾರೆ. ಒಂದು ವೇಳೆ ಮೂವರು ಸ್ಪರ್ಧಿಸಿದ್ರೆ ಮಂಡ್ಯದ ಜನತೆ ಯಾರ ಕೈ ಹಿಡಿಯುತ್ತಾರೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.

Related