ನಿಮ್ಮ ಸೇವೆಗೆ ಮತ್ತೊಂದು ಅವಕಾಶ ದೊರೆಯಲಿದೆ: ಮಾಜಿ ಸಿಎಂ

ನಿಮ್ಮ ಸೇವೆಗೆ ಮತ್ತೊಂದು ಅವಕಾಶ ದೊರೆಯಲಿದೆ: ಮಾಜಿ ಸಿಎಂ

ಹಾಸನ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಚ್ಚರಿ ಹೇಳಿಕೆಯನ್ನು ನೀಡಿಸಿ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದ್ದಾರೆ. ಮುಂದಿನ ಒಂದು ವರ್ಷದಲ್ಲಿ ಕರ್ನಾಟಕ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ ಎಂಬ ಹೇಳಿಕೆಯನ್ನು ನೀಡಿದ್ದಾರೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಪರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ದೇವರ ಇಚ್ಛೆಯಿಂದ ನಿಮ್ಮ ಸೇವೆ ಮಾಡಲು ನನಗೆ ಇನ್ನೊಂದು ಅವಕಾಶ ಸಿಗುತ್ತದೆ. ನಾನು 3 ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ನಿಮ್ಮ ಆಶೀರ್ವಾದದಿಂದಲೇ ನನಗೆ ಮೂರನೇ ಜನ್ಮ ಸಿಕ್ಕಿದೆ. ಈ ಜನ್ಮದಲ್ಲಿ ಇನ್ನೊಂದು ವರ್ಷದೊಳಗೆ ನಿಮ್ಮ ಸೇವೆಗೆ ಅವಕಾಶ ಸಿಗಲಿದೆ ಎಂದಿದ್ದಾರೆ. ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ಬಗ್ಗೆ ಮಾರ್ಮಿಕವಾಗಿ ಈ ರೀತಿ ಸುಳಿವು ನೀಡಿದ್ದಾರೆಯೇ ಎಂಬ ಗುಸುಗುಸು ಇದೀಗ ಆರಂಭವಾಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದಕ್ಕೆ ನಮಗೆ ಹೊಟ್ಟೆಕಿಚ್ಚು ಇಲ್ಲ. ಆದರೆ, ಈಗಿನ ಬೆಳವಣಿಗೆಗಳನ್ನು ನೋಡಿದರೆ ರಾಜ್ಯ ಎಲ್ಲಿಗೆ ಹೋಗುತ್ತದೋ ಎಂಬ ಆತಂಕ ಕಾಡುತ್ತಿದೆ. ಉಚಿತ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ಪಕ್ಷವೇನೂ ಅದರ ಹಣ ಖರ್ಚು ಮಾಡುತ್ತಿಲ್ಲ. ಬದಲಾಗಿ ಜನರ ಹಣದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

 

Related