“ಯುವನಿಧಿ” ಯೋಜನೆ ಜಾರಿ ಅನುಮಾನ!

“ಯುವನಿಧಿ” ಯೋಜನೆ ಜಾರಿ ಅನುಮಾನ!

ಬೆಂಗಳೂರು: ಕಾಂಗ್ರೆಸ್ ಪಕ್ಷವು ಚುನಾವಣೆಗೂ ಮುನ್ನ 5 ಗ್ಯಾರಂಟಿಗಳನ್ನು ಘೋಷಿಸಿದ್ದು, 5 ಗ್ಯಾರಂಟಿಗಳಲ್ಲಿ ಒಂದಾದ “ಯುವನಿಧಿ” ಗ್ಯಾರಂಟಿಯೋಜಯನ್ನು ಇಂದು ನಡೆದ ಬಜೆಟ್ ನಲ್ಲಿ ಇದರ ಬಗ್ಗೆ ಯಾವುದೇ ರೀತಿ ಮಂಡನೆ ಮಾಡದಿರುವುದರಿಂದ ಕಾಂಗ್ರೆಸ್ ಸರ್ಕಾರ ಯುವ ನಿಧಿಯ ಯೋಜನೆ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲವೆಂದು ಪ್ರಶ್ನೆ ಮೂಡುತ್ತಿದೆ.

ಹೌದು, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಬಜೆಟ್​​ನಲ್ಲಿಯೂ ಅನುದಾನಗಳನ್ನು ಘೋಷಿಸಿದೆ. ಆದರೆ, ನಿರುದ್ಯೋಗಿ ಯುವಕರಿಗೆ ಧನ ಸಹಾಯ ನೀಡುವ ‘ಯುವ ನಿಧಿ’ ಗ್ಯಾರಂಟಿ ಜಾರಿಗೆ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್​​ನಲ್ಲಿ ಅನುದಾನವನ್ನೇ ಘೋಷಿಸಿಲ್ಲ. ಇದು ಯೋಜನೆಯ ಅನುಷ್ಠಾನದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.

ಗೃಹಲಕ್ಷ್ಮೀ ಯೋಜನೆ ಕುರಿತು ಬಜೆಟ್​ನಲ್ಲಿ ಮುಖ್ಯಮಂತ್ರಿ ಪ್ರಸ್ತಾಪಿಸಿದರೆ, ಯುವ ನಿಧಿ ಯೋಜನೆಗೆ ಸಂಪನ್ಮೂಲ ಸಂಗ್ರಹಿಸಲು ಮತ್ತು ಹಂಚಿಕೆ ಮಾಡಲು ಸರ್ಕಾರ ಹೆಣಗಾಡುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿಗಳ ಭಾಗವಾಗಿರುವ ಈ ಯೋಜನೆಗೆ ಬಜೆಟ್​​ನಲ್ಲಿ ಅನುದಾನ ಹಂಚಿಕೆ ಮಾಡಲಾಗಿಲ್ಲ.

Related