ಪಕ್ಷದ ತಂಟೆಗೆ ಬಂದರೆ ಹುಷಾರ್ ಎಚ್‌ಡಿಕೆ ಎಚ್ಚರಿಕೆ!

ಪಕ್ಷದ ತಂಟೆಗೆ ಬಂದರೆ ಹುಷಾರ್ ಎಚ್‌ಡಿಕೆ ಎಚ್ಚರಿಕೆ!

ಬೆಂಗಳೂರು : ಜೆಡಿಎಸ್ ಪಕ್ಷದ ಸುದ್ದಿಗೆ ಬರಬೇಡಿ. ನಾನು ಕೈ ಹಾಕಿದರೆ ಸರಿ ಇರಲ್ಲ. ನನ್ನ ತಂಟೆಗೆ ಬಂದರೆ ಹುಷಾರ್. ‘ಹೀಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಈ ವೇಳೆ ಜೆ.ಪಿ. ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷಾಂತರ ಕಾರ್ಯಕರ್ತರ ಶಕ್ತಿ ಇರುವ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕೂಲ ಪರಿಸ್ಥಿತಿ ಎದುರಿಸಬೇಕಾಗುತ್ತದೆ.

ಜೆಡಿಎಸ್ ಮುಗಿಸಲು ಯಡಿಯೂರಪ್ಪ ಇನ್ನೊಂದು ಜನ್ಮ ಹುಟ್ಟಿ ಬಂದರೂ ಆಗುವುದಿಲ್ಲ. ಈವರೆಗೆ ನನ್ನ ಪಕ್ಷದ ತಂಟೆಗೆ ಬಂದಿಲ್ಲ. ನಿಮ್ಮ ಬಂಡವಾಳ ನನ್ನ ಕೈಯಲ್ಲಿದೆ ಎಂದರು.

2008ರಲ್ಲಿಯೇ ಜೆಡಿಎಸ್ ಮುಗಿಸುತ್ತೇನೆ, ಅಪ್ಪ-ಮಗನನ್ನು ಮುಗಿಸುವುದಾಗಿ ಹೇಳಿದ್ದರು. ಬಳಿಕ ರಾಜ ಕಾರಣ ಏನಾಯಿತು ಗೊತ್ತಿದೆಯಾ? ಮೂವರು ಮುಖ್ಯಮಂತ್ರಿ ಬದಲಾದರು. ಜೆಡಿಎಸ್ ನಿರ್ನಾಮ ಮಾಡುತ್ತೇವೆ ಎಂದು ಹೇಳಿದವರು ಎಲ್ಲೆಲ್ಲೋ ಹೋಗಿದ್ದಾರೆ. ಮುಂದಿನ ಬಾರಿಯೂ ನಾವೇ ಎಂದು ಬೀಗುತ್ತಿದ್ದಾರೆ. ಈ ಹಿಂದೆ ಇದೇ ಯಡಿಯೂರಪ್ಪ 10 ವರ್ಷ ನಾವೇ ಅಧಿಕಾರದಲ್ಲಿರುತ್ತೇವೆ ಎಂದಿದ್ದರು. ಆಮೇಲೆ ಅವರು ಎಲ್ಲಿ ಹೋದರು ಎಂದು ವ್ಯಂಗ್ಯವಾಡಿದರು.

Related