ಪರಿಸರ ಸಂರಕ್ಷಣೆಗೆ ಕರೆ ನೀಡಿದ ಗೋವಿಂದ ಕಾರಜೋಳ

ಪರಿಸರ ಸಂರಕ್ಷಣೆಗೆ ಕರೆ ನೀಡಿದ ಗೋವಿಂದ ಕಾರಜೋಳ

ಬೆಂಗಳೂರು: ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದ್ದು, ಪರಿಸರ ಸಂರಕ್ಷಣೆಗಾಗಿ ಸರ್ಕಾರದೊಂದಿಗೆ ಸಮಾಜವು ಶ್ರಮಿಸಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ಕರೆ ನೀಡಿದರು.

ಬೆಂಗಳೂರಿನ ಸಂಜೀವಿನಿ ನಗರದಲ್ಲಿ ಟಿ.ಜೆ ಸಂಜೀವಿನಿ ಟ್ರಸ್ಟ್ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮನೆಗೆರಡು ಸಸಿನೆಟ್ಟು ಬೆಳೆಸಬೇಕು. ಇತ್ತಿಚಿನ ದಿನಗಳಲ್ಲಿ ಜಾಗತಿಕ ತಾಪಮಾನ ಹೆಚ್ಚಾಗುತ್ತಿದ್ದು, ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನಾವು ಬಳುವಳಿಯಾಗಿ ನೀಡಬೇಕು.

ನೀರನ್ನು ಮಿತವಾಗಿ ಬಳಸಿ, ಸ್ವಚ್ಚತೆಯನ್ನು ಕಾಪಾಡಿ, ಗಿಡ ಮರಗಳನ್ನು ಬೆಳೆಸಿದರೆ ಪರಿಸರವನ್ನು ಸಂರಕ್ಷಿಸಬಹುದಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು. ಟ್ರಸ್ಟ್ ನ ಅಧ್ಯಕ್ಷ ಸೋನಶೇಖರ ಗೌಡ ಸೇರಿದಂತೆ ವಿವಿಧ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಎಂದು ಹೇಳಿದರು.

Related