ಪಾದರಾಯನಪುರದಲ್ಲಿ ಪೋಲೀಸರ ಪರೇಡ್

ಪಾದರಾಯನಪುರದಲ್ಲಿ ಪೋಲೀಸರ ಪರೇಡ್

ಬೆಂಗಳೂರು: ಪಾದರಾಯನಪುರದಲ್ಲಿ ನಡೆದ ಘಟನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆ.ಆರ್.ಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪೋಲೀಸರು ಪರೇಡ್ ನಡೆಸಿ ಸಾರ್ವಜನಿಕರು ಹೊರಗಡೆ ಬಾರದಂತೆ ಎಚ್ಚರಿಕೆ ನೀಡುವ ಮೂಲಕ ಜಾಗೃತಿ ಮೂಡಿಸಿದರು.

ಕೆ.ಆರ್.ಪುರ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕೆ.ಆರ್.ಪುರ, ದೇವಸಂದ್ರ, ಮಜೀದ್ ರೋಡ್, ಟೆಂಟ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪೋಲಿಸರು ಪರೇಡ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಕೊರೊನಾ ಮಹಾಮಾರಿ ಅಟ್ಟಹಾಸ ದಿನದಿಂದ ದಿನಕ್ಕೆ ಮುಂದುವರೆದು, ಕರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆ.ಆರ್.ಪುರದಲ್ಲಿ ಲಾಕ್ ಡೌನ್ ಇನ್ನಷ್ಟು ಕಠಿಣ ಮಾಡಲು ಪೋಲಿಸರು ಸಿದ್ಧತೆಗಳು ಮಾಡಿದ್ದು, ಸಾರ್ವಜನಿಕರು ಅನವಶ್ಯಕವಾಗಿ ಹೊರಬಾರದೆಂದು ಎಚ್ಚರಿಕೆ ನೀಡಿದರು.

Related