ಜಲಜೀವನ್ ಮಿಷನ್ನಡಿ 1.75 ಕೋಟಿ ಅನುದಾನ

ಜಲಜೀವನ್ ಮಿಷನ್ನಡಿ 1.75 ಕೋಟಿ ಅನುದಾನ

ತಿಂಗಳಾಡಿ : ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿ ಅನುದಾನವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯಿಂದ ಜಿಲ್ಲೆಯ ನಾನಾ ಗ್ರಾಮಗಳಿಗೆ ಹಂಚಿಕೆ ಮಾಡಲಾಗಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಜಿಪಂ ಕ್ಷೇತ್ರಕ್ಕೆ ಒಟ್ಟು 1.75 ಕೋಟಿ ಅನುದಾನ ಲಭಿಸಿದ್ದು, ಕ್ಷೇತ್ರದ ನಾಲ್ಕು ಗ್ರಾಮಗಳಿಗೆ ಹಂಚಲಾಗಿದೆ.

ಮುಡ್ನೂರು ಗ್ರಾಮಗಳಲ್ಲಿ ಜಿಪಂ ಅಧ್ಯಕ್ಷೆ ಹಾಗೂ ಕ್ಷೇತ್ರದ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ನೇತೃತ್ವದ ಅಧಿಕಾರಿಗಳ ತಂಡ ಸಭೆ ನಡೆಸಿ ಅನುದಾನವನ್ನು ಬಳಕೆ ಮಾಡುವ ಬಗ್ಗೆ ಗ್ರಾ ಪಂ ಅಧಿಕಾರಿಗಳಿಗೆ ಮಾಹಿತಿ ನೀಡಿದೆ. ಪೈಪ್ ಲೈನ್ ಕಾಮಗಾರಿ, ಟ್ಯಾಂಕ್ ಮತ್ತು ಕೊಳವೆ ಬಾವಿ ನಿರ್ಮಾಣ ಮಾಡುವಲ್ಲಿ ಅನುದಾನ ಬಳಕೆ ಮಾಡಲಾಗುತ್ತದೆ.

ಇದರಿಂದ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥವಾಗಲಿದೆ ಎಂದರು. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಯೋಜನೆಯ ಬಗ್ಗೆ ಮಾಹಿತಿ ನೀಡಿ, ಯೋಜನೆಯನ್ನು ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಗ್ರಾಪಂ ಅಧಿಕಾರಿಗಳಿಗೆ ತಿಳಿಸಿದರು.

Related