ʼಕೈʼ ಸರ್ಕಾರ ಬಂದರೆ ಮಹಿಳೆಯರಿಗೆ, ಯುವಕರಿಗೆ 1 ಲಕ್ಷ ಆರ್ಥಿಕ ನೆರವು: ಡಿಸಿಎಂ

ʼಕೈʼ ಸರ್ಕಾರ ಬಂದರೆ ಮಹಿಳೆಯರಿಗೆ, ಯುವಕರಿಗೆ 1 ಲಕ್ಷ ಆರ್ಥಿಕ ನೆರವು: ಡಿಸಿಎಂ

ಕಲಬುರಗಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆಯನ್ನು ಏರಿದರೆ ದೇಶದಲ್ಲಿರುವ ಮಹಿಳೆಯರಿಗೆ ಮತ್ತು ಯುವಕರಿಗೆ ಪ್ರತಿ ವರ್ಷಕ್ಕೆ ತಲಾ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಕಲಬುರಗಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ದುರಾಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ ಕಿತ್ತೆಸೆದು ಬಡವ ದಿನದಲಿತರಿಗೆ ಸಂಕಷ್ಟಗಳಿಗೆ ಸ್ಪಂದಿಸುತ್ತಿರುವ ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಹಿಂದೊಮ್ಮೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ಅಲಂಕರಿಸಿದ್ದ ಸ್ಥಾನದಲ್ಲಿ ಕಲಬುರಗಿ ಭಾಗದ ಧೀಮಂತ ನಾಯಕ ಮಲ್ಲಿಕಾರ್ಜುನ ಖರ್ಗೆ ಆಸೀನರಾಗಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ಅವರು ₹2,000 ಕೋಟಿ ವೆಚ್ಚದಲ್ಲಿ ಈಎಸ್ ಐ ಆಸ್ಪತ್ರೆಯನ್ನು ಕಟ್ಟಿಸಿದ್ದಾರೆ ಮತ್ತು ಎಲ್ಲ ಬಡ ಕುಟುಂಬಗಳಿಗೆ ₹ 25 ಲಕ್ಷ ಮೊತ್ತದ ಆರೋಗ್ಯ ವಿಮೆಯ ಸವಲತ್ತು ಮಾಡಿಸಿಕೊಟ್ಟಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಾನು ಸಹಿಮಾಡಿ ಜನರಿಗೆ ಲಭ್ಯವಾಗುವಂತೆ ಮಾಡಿದ ಗ್ಯಾರಂಟಟಿ ಯೋಜನೆಗಳ ಹಾಗೆಯೇ ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ಮತ್ತು ಯುವಕರಿಗೆ ವಾರ್ಷಿಕ ತಲಾ ಒಂದು ಲಕ್ಷ ರೂ. ನೀಡುವ ಗ್ಯಾರಂಟಿ ಯೋಜನೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸಹಿ ಹಾಕಿದ್ದಾರೆ ಎಂದು ಶಿವಕುಮಾರ್ ಹೇಳಿದರು.

 

Related