ಚಿಕ್ಕಮಂಗಳೂರು: ಇತ್ತೀಚಿನ ದಿನಗಳಲ್ಲಿ ನಮ್ಮ ಸುತ್ತಮುತ್ತಲಿನ ವಾತಾವರಣ ಮತ್ತು ನಾವು ಸೇವಿಸುವಂತಹ ಆಹಾರದಿಂದ ನಮ್ಮ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತವೆ. ಅದರಲ್ಲೂ ಹೃದಯಗತಗಳು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿ ಹೋಗಿದೆ.
ಕಳೆದ ಕೆಲವು ವರ್ಷಗಳ ಹಿಂದೆ ವಯಸ್ಸಾದವರಲ್ಲಿ ಹೃದಯಘಾತಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಲ್ಲೂ ಹೃದಯ ಸಮಸ್ಯೆ ಹೆಚ್ಚಾಗಿ ಕಾಣುತ್ತಿವೆ.
ಹೌದು ಚಿಕ್ಕಮಂಗಳೂರಿನ ತಾಲೂಕಿನಲ್ಲಿ 13 ವರ್ಷದ ಬಾಲಕಿಯು ಹೃದಯಗತದಿಂದ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೂಡಿಗೆರೆ ತಾಲೂಕಿನ ಜೊಗಣ್ಣನಕೆರೆ ಗ್ರಾಮದ ಕೆಸವಳಲು ಸಮೀಪದ ಸೃಷ್ಟಿ(13) ಮೃತ ಶಾಲಾ ಬಾಲಕಿಯಾಗಿದ್ದು, ದಾರದಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7 ನೇ ತರಗತಿ ವ್ಯಾಸಂಗ ಮಾಡುತ್ತಿದರು.
ಇಂದು ಬೆಳಿಗ್ಗೆ 9.30.ರ ಸಮಯದಲ್ಲಿ ಶಾಲೆಗೆ ಹೊಗಲು ದಾರದಹಳ್ಳಿ ಸರ್ಕಲ್ ಬಳಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಸ್ಥಳೀಯರು ಆಕೆಯನ್ನು ಎಂ.ಜಿ.ಎಂ ಆಸ್ಪತ್ರೆಗೆ ಬಾಲಕಿಯನ್ನು ರವಾನಿಸಿದ್ದಾರೆ. ಆದರೆ ಸ್ಥಳದಲ್ಲೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿರುವುದಾಗಿ ವೈದ್ಯರು ತಿಳಿಸಿದ್ದಾರೆ. ತಾಯಿ ತಂದೆ ಇಬ್ಬರು ಸಹೋದರಿಯರು ಒಬ್ಬ ಸಹೊದರರನ್ನು ಸೃಷ್ಟಿ ಅಗಲಿದ್ದಾಳೆ.