ವರ್ತೂರ್‌ ಸಂತೋಷ್ ಗೆ 14ದಿನ ನ್ಯಾಯಾಂಗ ಬಂಧನ

ವರ್ತೂರ್‌ ಸಂತೋಷ್ ಗೆ 14ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಕನ್ನಡದ ಅತ್ಯಂತ ದೊಡ್ಡ ರಿಯಾಲಿಟಿ ಶೋ ಎಂದರೆ ಅದು ಬಿಗ್ ಬಾಸ್. ಈ ಬಿಗ್ ಬಾಸ್ ಸೀಸನ್ 10ರಲ್ಲಿ ಸ್ಪರ್ಧೆಯಾಗಿ ಬಂದಿರುವಂತಹ ವರ್ತೂರು ಸಂತೋಷ ಅವರನ್ನು ಬಿಗ್ ಬಾಸ್ ಮನೆಯಿಂದ ಅರೆಸ್ಟ್ ಮಾಡಲಾಗಿತ್ತು.

ವನ್ಯಜೀವಿಯಾಗಿರುವಂತಹ ಹುಲಿಯ ಅವುಗಳನ್ನು ಧರಿಸಿರೋದಕ್ಕೆ ಸಂತೋಷ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನನದಲ್ಲಿ ಇರಿಸಲಾಗಿದೆ.

ಹೌದು, ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಜೈಲು ಪಾಲಾಗಿದ್ದಾರೆ. ಹುಲಿ ಉಗುರು ಧರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಬಂಧಿಸಲಾಗಿತ್ತು ಅರಣ್ಯ ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಸಂತೋಷ್ ಅವರನ್ನು ಹಾಜರು ಪಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನಗಳ ಕಾಲ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ನೆನ್ನೆ ರಾತ್ರಿಯಿಂದಲೇ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ತನ್ನಲ್ಲಿರುವ ಹುಲಿ ಉಗುರು ಬಂದಿದ್ದು ಹೇಗೆ? ಯಾರು ಕೊಟ್ಟರು? ಎಲ್ಲಿಂದ ಖರೀದಿ ಮಾಡಿದಿದ್ದೀರಿ? ಮಾರಿದವರು ಈಗ ಎಲ್ಲಿದ್ದಾರೆ? ಎಷ್ಟು ಮಂದಿಗೆ ಈ ರೀತಿ ಉಗುರು ಮಾರಲಾಗಿದೆ ಹೀಗೆ ಇತ್ಯಾದಿ ಪ್ರಶ್ನೆಗಳನ್ನು ಅರಣ್ಯಾಧಿಕಾರಿಗಳು ಸಂತೋಷ್ ಮುಂದೆ ಇಟ್ಟಿದ್ದರು. ಅದಕ್ಕೆ ಸಂತೋಷ್ ಕೂಡ ಉತ್ತರ ನೀಡಿದ್ದಾರೆ ಎನ್ನುವ ಮಾಹಿತಿ ಇದೆ.

Related