ಸಿಲ್ಕಾನ್ ಸಿಟಿಯಲ್ಲಿ ಉದ್ಯೋಗ ಹೆಸರಿನಲ್ಲಿ ವಂಚನೆ 2 ಬಂಧನ

ಸಿಲ್ಕಾನ್ ಸಿಟಿಯಲ್ಲಿ ಉದ್ಯೋಗ ಹೆಸರಿನಲ್ಲಿ ವಂಚನೆ 2 ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡುತ್ತಿರುವ ಪ್ರಕಟಣೆಗಳು ಹೆಚ್ಚಾಗಿ ಕಂಡು ಬರುತ್ತಿರುವ ಬೆನ್ನಲ್ಲೇ ಮತ್ತೆ ಇದೀಗ ಶ್ರೀನಾಗರಾದ ಕಾಳಿದಾಸ ಲೇಔಟ್ ನಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಹೌದು, ಬಿಬಿಎಂಪಿ ವತಿಯಿಂದ ಸಬ್ಸಿಡಿ ದರದಲ್ಲಿ ಕಾರಿನ ಲೋನ್, ನಿವೇಶನ ಕೆಲಸ, ವಿಧೆವೆಯವರ ಮಾಶಾಸನ ಮಾಡಿಸಿ ಕೊಡುವುದಾಗಿ ಹೇಳಿ ವಂಚಿಸುತ್ತಿದ್ದ ಗ್ಯಾಂಗ್ ಪತ್ತೆಹಚ್ಚಿರುವ ಉತ್ತರ ವಿಭಾಗದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದೀಪಕ್ ಅಲಿಯಾಸ್ ಕಿರಣ್(22)ವಿದ್ಯಾರಣ್ಯಪುರದ ಕಾವೇರಿ ಬಡಾವಣೆಯ ಹರ್ಷಾ ಅಲಿಯಾಸ್ ಜಗದೀಶ್ (21)ಬಂಧಿತ ಆರೋಪಿಗಳಾಗಿದ್ದು, ಗ್ಯಾಂಗ್ ನಲ್ಲಿದ್ದು ತಲೆಮರೆಸಿಕೊಂಡಿರುವ ಭಾವನ, ಭಾವನಿ ಹಾಗೂ ಸಂಜಯ್ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ಅ. 31 ರಂದು ಮೊಬೈಲ್ ನಿಂದ ಕರೆ ಮಾಡಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕಂಪ್ಯೂಟರ್ ಅಪರೇಟರ್ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರಿಂದ 8 ಸಾವಿರ ರೂಗಳನ್ನು ಆನ್‌ಲೈನ್‌ನಲ್ಲಿ ವರ್ಗಾಣೆ ಮಾಡಿಸಿಕೊಂಡು ಯಾವುದೇ ಕೆಲಸ ಕೊಡಿಸದೇ ಮೋಸ ಮಾಡಿರುವುದಾಗಿ ನೀಡಿದ ದೂರಿನ ಸಂಬಂಧ ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಐಟಿ ಆಕ್ಟ್, ವಂಚನೆ ಪ್ರಕರಣ ದಾಖಲಾಗಿರುತ್ತು.

ಈ ಪ್ರಕರಣದಲ್ಲಿ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ಕೈಗೊಂಡು ಗ್ಯಾಂಗ್ ನ ಇಬ್ಬರನ್ನು ಬಂಧಿಸಿ 2 ಮೊಬೈಲ್ ಗಳು, 2 ಸಾವಿರ ನಗದನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

 

Related