2023-24 ಬಜೆಟ್:​​​ ಹೊಸ-ಹೊಸ ಯೋಜನೆಗಳ ಘೋಷಣೆ

2023-24 ಬಜೆಟ್:​​​ ಹೊಸ-ಹೊಸ ಯೋಜನೆಗಳ ಘೋಷಣೆ

ಬೆಂಗಳೂರು: 2023-24 ಬಜೆಟ್​​ ಕರ್ನಾಟಕದಲ್ಲಿಸಿಎಂ ಹಲವಾರು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

  • ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ

ಉನ್ನತ ಶಿಕ್ಷಣ ಹೊಂದಲು ಅನುಕೂಲವಾಗುವಂತೆ  ‘ಮುಖ್ಯಮಂತ್ರಿ ವಿದ್ಯಾಶಕ್ತಿ’ ಎಂಬ ಯೋಜನೆ ಯನ್ನು ಸಿಎಂ ಘೋಷಿಸಿದ್ದಾರೆ. ಸರ್ಕಾರಿ ಪದವಿ ಪೂರ್ವ, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯತಿ ನೀಡಲಾಗುತ್ತದೆ. ಈ ಯೋಜನೆಯಿಂದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ.

  • ಮಕ್ಕಳ ಬಸ್ ಯೋಜನೆ

ಸಿಎಂ ಬಸವರಾಜ್​ ಬೊಮ್ಮಾಯಿ ಅವರು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್​ ಯೋಜನೆಯನ್ನು ಘೋಷಿಸಿದ್ದಾರೆ.  ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಕ್ಕಳ ಬಸ್ಸು ಎಂಬ ಹೊಸ ಯೋಜನೆಯನ್ನು ಜಾರಿ ಮಾಡಲಾಗುತ್ತದೆ. ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ ವೆಚ್ಚದಲ್ಲಿ 1000 ಹೊಸ ಬಸ್ಸುಗಳ ಕಾರ್ಯಾಚರಣೆ ಶುರುವಾಗಲಿದೆ.

  • ಭೂಸಿರಿ ಹೊಸ ಯೋಜನೆ

ರೈತಾಪಿ ವರ್ಗಕ್ಕೆ ಅನುಕೂಲವಾಗುವಂತೆ ಮಹತ್ತರ ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳಲ್ಲಿ ಭೂಸಿರಿ ಹೊಸ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವರಿಗೆ 10 ಸಾವಿರ ಹೆಚ್ಚುವರಿ ಸಹಾಯ ಧನ ಸಿಗಲಿದೆ.

  • ಹಳ್ಳಿ ಮುತ್ತು ಎಂಬ ಯೋಜನೆ

 

ಹಳ್ಳಿ ಮುತ್ತು ಯೋಜನೆಯಡಿ ಕನ್ನಡ ಸರ್ಕಾರಿ ಶಾಲೆಗಳಲ್ಲಿ ಓದಿದ, ಸಿಇಟಿ ಮೂಲಕ ಆಯ್ಕೆಯಾದ ವಿಧ್ಯಾರ್ಥಿಗಳಿಗೆ ವೃತಿಪರ ಕೋರ್ಸ್ ಗಳಿಗೆ ಸಂಪೂರ್ಣ ಶುಲ್ಕವನ್ನು ಸರ್ಕಾರವೇ ಭರಿಸುತ್ತದೆ.  ಅತ್ಯುತ್ತಮ 500 ವಿದ್ಯಾರ್ಥಿಗಳಿಗೆ ಈ ಯೋಜನೆ ಅನ್ವಯವಾಗಲಿದೆ.

  • ವಾತ್ಸಲ್ಯ ಯೋಜನೆ

ಗ್ರಾಮೀಣ ಪ್ರದೇಶದ 6 ವರ್ಷದೊಳಗಿನ ಮಕ್ಕಳಿಗೆ ವರ್ಷಕ್ಕೆ 2 ಉಚಿತ ಆರೋಗ್ಯ ತಪಾಸಣೆಗಳನ್ನು ಮಾಡುವ ಗುರಿ ಹೊಂದಲಾಗಿದೆ. ಹೀಗಾಗಿ ಸರ್ಕಾರವು ವಾತ್ಸಲ್ಯ ಯೋಜನೆಯನ್ನು ಪರಿಚಯಿಸಿದೆ.

  • ಗೃಹಿಣಿ ಶಕ್ತಿ ಯೋಜನೆ

ಗೃಹಿಣಿ ಶಕ್ತಿ ಯೋಜನೆಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು 500 ರೂ. ವಿತರಣೆ ಮಾಡಲಾಗುತ್ತದೆ. ಹೀಗಾಗಿ ಗೃಹಿಣಿ ಶಕ್ತಿ ಯೋಜನೆಯನ್ನು ಪರಿಚಯಿಸಲಾಗಿದೆ. 1 ಲಕ್ಷ ಗೃಹಿಣಿಯರಿಗೆ ಉಚಿತ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡಲಾಗುತ್ತದೆ. ಸಂಘಟಿತ ವಲಯದಲ್ಲಿ ದುಡಿಯುವ ಮಹಿಳೆಯರಿಗೆ ಉಚಿಯ ಬಸ್ ಪಾಸ್ ನೀಡಲಾಗುತ್ತದೆ. ಹೀಗಾಗಿ 1000 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ.

  • ನಮ್ಮ ನೆಲೆ ಯೋಜನೆ

ಆರ್ಥಿಕ ದುರ್ಬಲ ವರ್ಗದವರಿಗೂ ವಿಶೇಷ ಅನುದಾನ ನೀಡಿದ್ದಾರೆ.  ಗೃಹಮಂಡಳಿಯಿಂದ ಆರ್ಥಿಕ ದುರ್ಬಲ ವರ್ಗದವರಿಗೆ 10 ಸಾವಿರ ನಿವೇಶನ ನೀಡಲಾಗುತ್ತದೆ ಎಂದು ಬಜೆಟ್​​ನಲ್ಲಿ ಘೋಷಿಸಲಾಗಿದೆ.

  • ಕಲಿಕೆ ಜೊತೆಗೆ ಕೌಶಲ್ಯ

ವಿದ್ಯಾರ್ಥಿಗಳಿಗೆ ಕಲಿಕೆ ಜೊತೆಗೆ ಕೌಶಲ್ಯವನ್ನು ಸಹ ಕಲಿಸಲು ಬೊಮ್ಮಾಯಿ ಹೊಸ ಯೋಜನೆಯನ್ನು ರೂಪಿಸಿದ್ದಾರೆ.  ವಿದ್ಯಾರ್ಥಿಗಳಿಗೆ ಕೈಗಾರಿಕಾ ಆದ್ಯತಾ ಹಾಗೂ ಉದ್ಯಮಶೀಲ ತರಬೇತಿ ನೀಡಲಾಗುತ್ತದೆ ಎಂದು ಬಜೆಟ್​​​ನಲ್ಲಿ ಘೋಷಿಸಲಾಗಿದೆ.

Related