ಬೆಂಗಳೂರು: ಇಂದು 2023-24ನೇ ಸಾಲಿನ ಬಜೆಟ್ ಪ್ರಾರಂಭವಾಗಿದ್ದು ಸಿಎಂ ಬೊಮ್ಮಾಯಿಯವರು ಶಾಲಾ-ಕಾಲೇಜ್ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಒದಗಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಯುವಜನರ ಬೆಂಬಲ ಪಡೆಯಲು ಅವರು ಮುಂದಾಗಿದ್ದಾರೆ ಎನ್ನಲಾಗಿದೆ. ಮಹಿಳಾ ಕಾರ್ಮಿಕರಿಗೆ 500 ರೂ ಸಹಾಯಧನ, 50 ಲಕ್ಷ ಮಹಿಳೆಯರಿಗೆ ಉಚಿತ ಪಾಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸ್ತ್ರೀ ಸಬಲೀಕರಣಕ್ಕೆ ರಾಜ್ಯ ಬಜೆಟ್ ನಲ್ಲಿ ಬಂಪರ್ ಘೋಷಣೆ ಮಾಡಿದ್ದಾರೆ.
ಇದರಿಂದ ಶಾಲೆಗೆ ತೆರಳುವ ವಿದ್ಯಾರ್ಥಿನಿಯರಿಗೆ ಹಾಗೂ ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಸಾಕಷ್ಟು ಸಹಾಯವಾಗಲಿದೆ. ಶಾಲಾ ಕಾಲೇಜು ಮಕ್ಕಳ ಬಸ್ಸು ಸಮಸ್ಯೆ ನಿವಾರಣೆಗೆ ಕ್ರಮ ಕೂಡ ಕೈಗೊಳ್ಳಲಾಗುತ್ತದೆ. ಮಕ್ಕಳ ಬಸ್ಸು ಯೋಜನೆ ಪ್ರಾರಂಭಕ್ಕೆ ನಿರ್ಧಾರ ತೆಗೆದುಕೊಳ್ಳಲಾಗಿದೆ. 100 ಕೋಟಿ ವೆಚ್ಚದಲ್ಲಿ 1000 ಹೊಸ ಕಾರ್ಯಾಚರಣೆ. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ಸಾಧ್ಯತೆ ಇದೆ.