4,160 ಕೆ.ಜಿ ಪ್ಲಾಸ್ಟಿಕ್ ಜಪ್ತಿ ..!

4,160 ಕೆ.ಜಿ ಪ್ಲಾಸ್ಟಿಕ್ ಜಪ್ತಿ ..!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಾಸರಹಳ್ಳಿ ವಲಯ ವ್ಯಾಪ್ತಿಯ ಶೆಟ್ಟಿಹಳ್ಳಿ ವಾರ್ಡ್ ನಲ್ಲಿ ಪ್ಲಾಸ್ಟಿಕ್ ತಯಾರು ಮಾಡುವ ಸುಭದ್ರ ಎಂಟರ್ ಪ್ರೈಸಸ್ ಕಾರ್ಖಾನೆ ಮೇಲೆ ದಾಳಿ ನಡೆಸಿ ಸುಮಾರು 4,160 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಂಡದಲ್ಲಿ ದಾಸರಹಳ್ಳಿ ವಲಯದ ವಲಯ ಜಂಟಿ ಆಯುಕ್ತರ ಸಮ್ಮುಖದಲ್ಲಿ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಧೀಕ್ಷಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ/ಘನತ್ಯಾಜ್ಯ ಪರಿವೀಕ್ಷಕರು, ಮಾರ್ಷಲ್ ಸೂಪರ್ವೈಸರ್ ಮತ್ತು ಇನ್ನಿತರ ಸಿಬ್ಬಂದಿಗಳು ಭಾಗವಹಿಸಿದ್ದರು. 7 ಆಟೋ ಟಿಪ್ಪರ್ ಗಳಲ್ಲಿ ವಶಪಡಿಸಿಕೊಂಡ ನಿಷೇಧಿತ ಪ್ಲಾಸ್ಟಿಕ್ ಅನ್ನು ವಲಯ ಜಂಟಿ ಆಯುಕ್ತರು ಪರಿಶೀಲಿಸಿ, ಚೂರು ಚೂರು ಮಾಡಿ ದೊಡ್ಡಬಿದರಕಲ್ಲು ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ವಿಲೇವಾರಿ ಮಾಡಲು ಮಾನ್ಯ ವಲಯ ಜಂಟಿ ಆಯುಕ್ತರು ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಗರದಾದ್ಯಂತ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಮಾರಾಟ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ಅನಿರೀಕ್ಷಿತ ತಪಾಸಣೆ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಜೊತೆಗೆ ದಂಡ ವಿಧಿಸಲಾಗುತ್ತಿದೆ.

ಪಾಲಿಕೆಯ ಎಂಟೂ ವಲಯಗಳಲ್ಲಿ ಬರುವ ಎಲ್ಲಾ ವಾರ್ಡ್ಳಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಪೂರ್ಣವಾಗಿ ನಿಲ್ಲಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಘನತ್ಯಾಜ್ಯ ವಿಭಾಗದದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಂತೆ ಪಾಲಿಕೆಯ ಪಾಲಿಕೆ ಕಿರಿಯ ಆರೋಗ್ಯ ಪರಿವೀಕ್ಷಕರು, ಮಾರ್ಷಲ್ಗಳ ಮೇಲ್ವಿಚಾರಕರು ಹಾಗೂ ಮಾರ್ಷಲ್ಗಳ ತಂಡವು ಅನಿರೀಕ್ಷಿತವಾಗಿ ಸಗಟು ವ್ಯಾಪಾರ ಮಳಿಗೆಗಳು, ಅಂಗಡಿಗಳು, ಹೋಟೆಲ್ ಉದ್ದಿಮೆ, ಪ್ಲಾಸ್ಟಿಕ್ ಉತ್ಪಾದಿಸುವ ಉದ್ದಿಮೆಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್ ಜಪ್ತಿ ಮಾಡುವುದರ ಜೊತೆಗೆ ದಂಡ ವಿಧಿಸುತ್ತಿವೆ. ಅಲ್ಲದೆ ಮತ್ತೊಮ್ಮೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.

Related