14 ದಿನಗಳ ಪೊಲೀಸ್ ಕಸ್ಟಡಿಗೆ

  • In Crime
  • August 16, 2021
  • 376 Views
14 ದಿನಗಳ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ 2 ಕಾರುಗಳಿಗೆ ರಾತ್ರೋ ರಾತ್ರಿ ಬೆಂಕಿ ಇಟ್ಟ ಪ್ರಕರಣದಲ್ಲಿ, ಪೊಲೀಸರು ಮೂವರನ್ನು ಬಂಧಿಸಿದ್ದರು, ನ್ಯಾಯಾಂಗ ಬಂಧನಕ್ಕೆ ಒಳಪಡಿಲಾಗಿತ್ತು, ಮತ್ತೆ ಸೋಮವಾರ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಶ ಪಡೆದಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಂತ ರಾಜ್ಯ ಸರ್ಕಾರವೂ ಆರೋಪಿಗಳ ಪತ್ತೆಗಾಗಿ ಸೂಚಿಸಿತ್ತು. ಮೂರು ಠಾಣೆಗಳ ಪೊಲೀಸರು ಕಾರ್ಯಾಚರಣೆ ನಡೆಸಿ, ಸಿಸಿಟಿವಿ ವೀಡಿಯೋ ದೃಶ್ಯಾವಳಿ ಆಧರಿಸಿ ಸಾಗರ್ ತಾಪ, ಶ್ರೀಧರ್ ಮತ್ತು ನವೀನ್, ಬಂಧಿಸಿದ್ದರು.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಪೀಠವು, ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳನ್ನು ಇಂದು ತಮ್ಮ ವಶಕ್ಕೆ ನೀಡಬೇಕೆಂದು ಪೊಲೀಸರು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

Related