ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾರೂ ಭಯ ಪಡಬೇಕಾದ ವಾತಾವರಣ ಇಲ್ಲ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ರಾಜ್ಯ ಸರ್ಕಾರವು ಕಠಿಣ ರೂಲ್ಸ್ ತಂದು ಕೊರೊನಾ ನಿಯಂತ್ರಣ ಮಾಡುತ್ತಿದೆ. ಬಿಬಿಎಂಪಿ ಸರ್ವೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಲಸಿಕೆ ವಿತರಣೆ ಹೆಚ್ಚಳ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ವರಮಹಾಲಕ್ಷ್ಮೀ ಹಬ್ಬ ಇರುವ ಹಿನ್ನೆಲೆ ರಾಜ್ಯಾದ್ಯಂತ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಗಳಲ್ಲಿ ಖರೀದಿ ಮಾಡಲು ಜನ ಹೆಚ್ಚಾಗಿದ್ದಾರೆ. ಕೊರೊನಾ ಮೂರನೇ ಅಲೆ ಆತಂಕದ ನಡುವೆಯೂ ಜನ ಹೂ, ಹಣ್ಣು ಖರೀದಿಸುವಲ್ಲಿ ಬ್ಯುಸಿಯಾಗಿದ್ದು, ಕೋವಿಡ್ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದು ಕಂಡುಬರುತ್ತಿದೆ.