ಹುಬ್ಬಳಿ: ಕ್ರೂರಿ ಮಗನೊಬ್ಬ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಹತ್ಯೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಬೆನ್ನೂರು ಗ್ರಾಮದಲ್ಲಿ ನಡೆದಿದೆ.
ಶಾಂತವ್ವ ಕಲ್ಲಪ್ಪ ಅಣ್ಣಗೇರಿ (65) ಮಗನಿಂದಲೇ ಕೊಲೆಯಾದ ದುರ್ದೈವಿ. ಬಸವರಾಜ ಕಲ್ಲಪ್ಪ ಅಣ್ಣಗೇರಿ ಕೊಲೆ ಆರೋಪಿ . ಬಸವರಾಜ ಆಸ್ತಿಗಾಗಿ ಪ್ರತಿನಿತ್ಯ ತಾಯಿಗೆ ಕಿರುಕುಳ ನೀಡುತ್ತಿದ್ದ. ಇಂದು ಆಸ್ತಿಗಾಗಿ ಪೀಡಿಸಿ, ದೊಣ್ಣೆಯಿಂದ ಹೊಡೆದು ತಾಯಿಯನ್ನು ಹತ್ಯೆ ಮಾಡಿದ್ದಾನೆ.
ಸದ್ಯ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಅಣ್ಣೀಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.