ಆನೆ ದಾಳಿಗೆ ಯುವಕ ಸಾವು

  • In Crime
  • May 10, 2022
  • 313 Views

ಹಾಸನ: ಸಕಲೇಶಪುರ ಬಾಳ್ಳುಪೇಟೆಯ ಗಾಳಿಗುಡ್ಡ ಗ್ರಾಮದಲ್ಲಿ ರವಿ (೨೮)ಎಂಬ ಯುವಕ ಆನೆ ದಾಳಿಗೆ ಬಲಿಯಾಗಿದ್ದಾನೆ.

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಆನೆ ಏಕಾಏಕಿ ದಾಳಿ ನಡೆಸಿದೆ. ಹಾಸನ ಸಕಲೇಶಪುರದಲ್ಲಿ ಜನರ ಮೇಲೆ ಕಾಡಾನೆ ದಾಳಿ ಮುಂದುವರಿದಿದ್ದು, ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾಡಾನೆಗಳ ಹಾವಳಿಯಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಕ್ರಮಕೈಗೊಳ್ಳದ ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಭಾರೀ ಆಕ್ರೋಶ ಹೊರಹಾಕಿದ್ದಾರೆ.

Related