ಧ್ವನಿ ವರ್ಧಕ ಸಂಬಂಧ ಈಗಾಗಲೇ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದರಂತೆ ಬೆಳಗ್ಗೆ 5 ಗಂಟೆಗೆ ಆಜಾನ್ ಕೂಗದಿರಲು ನಿರ್ಧರಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಮಸೀದಿಗಳು ಇನ್ಮುಂದೆ ಆಜಾನ್ ಕೂಗದಿರಲು ಬೆಂಗಳೂರಿನಲ್ಲಿ ನಿರ್ಧರಿಸಿದೆ. ಈ ಸಂಬಂಧ ಮುಸ್ಲಿಂ ಮುಖಂಡರು ಸಭೆ ನಡೆಸಿದ್ದು, ಅದರಲ್ಲಿ ಇನ್ಮುಂದೆ ಧ್ವನಿ ವರ್ಧಕದ ಮೂಲಕ ಆಜಾನ್ ಕೂಗದಿರಲು ನಿರ್ಧರಿಸಲಾಗಿದೆ.
ಬೆಳಗ್ಗೆ 6 ಗಂಟೆ ಬಳಿಕ ಪೊಲೀಸರ ಅನುಮತಿ ಪಡೆದು ಆಜಾನ್ ಕೂಗಲು ಅನುಮತಿ ಪಡೆಯಲಾಗಿದೆ.
ಸುಪ್ರೀಂ ಕೋರ್ಟ್ ತೀರ್ಪಿನಂತೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿ ವರ್ಧಕ ಬಳಕೆ ಮಾಡದಂತೆ ಈಗಾಗಲೇ ಸರ್ಕಾರ ಮತ್ತು ಪೊಲೀಸ್ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ, ಈ ಸಂಬಂಧ ನೋಟಿಸ್ ಜಾರಿ ಮಾಡಿದ್ದರೂ ಕೂಡ ಕೆಲಸ ಮಸೀದಿಗಳಲ್ಲಿ ಆಜಾನ್ ಕೂಗಲಾಗುತ್ತಿತ್ತು. ಈ ಸಂಬಂಧ ಹಿಂದೂ ಸಂಘಟನೆಗಳು ಸರ್ಕಾರಕ್ಕೆ ದೂರು ಸಲ್ಲಿಸಿದ್ದವು.