ಹುಬ್ಬಳ್ಳಿ, ಫೆ. 18: ಪಾಕಿಸ್ತಾನ ಪರ ಘೋಷಣೆ ಕೂಗಿದ ನಗರದ ಕೆ ಎಲ್ಇ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು
ಹಿಂಡಲಗಾ ಕಾರಾಗೃಹಕ್ಕೆ ಶಿಪ್ಟ್ ಮಾಡಲಾಗಿದೆ.
ನಿನ್ನೆ 3ನೇ ಜೆ ಎಂ ಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಆಗ ಅಮಿರ್, ಬಾಸಿತ್, ತಾಲಿಬ್ ಅವರನ್ನು ಮಾ.2 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಳಿಕ ನಗರದ ಉಪಕಾಗೃಹಕ್ಕೆ ಕಳುಹಿಸಿಕೊಡಲಾಗಿತ್ತು.
ನಿನ್ನೆ ಕೋರ್ಟ್ ನಿಂದ ಜೈಲಿಗೆ ಕಳುಹಿಸುವಾಗ ಹೈಡ್ರಾಮಾ ಸೃಷ್ಟಿಯಾಗಿತ್ತು. ಹಿಂದು ಪರ ಸಂಘಟನೆ ಕಾರ್ಯಕರ್ತರು ಆರೋಪಿಗಳ ಮೇಲೆ ಹಲ್ಲೆ ನಡೆಸಿದ್ದರು. ಹೀಗಾಗಿ ಜೈಲಿನಲ್ಲಿಯೂ ತಮ್ಮ ಮೇಲೆ ಹಲ್ಲೆ ನಡೆಯಬಹುದು ಎಂಬ ಆತಂಕದಿಂದ ರಾತ್ರಿಯೀಡಿ ನಿದ್ದೆ ಮಾಡದೇ ಭಯದಿಂದ ಕುಳಿತುಕೊಂಡಿದ್ದರು ಎನ್ನಲಾಗಿದೆ.
ಹೀಗಾಗಿ ಇಂದು ಬೆಳಗ್ಗೆ ಹುಬ್ಬಳ್ಳಿಯ ಉಪ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಕಾರಾಗೃಹಕ್ಕೆ ಆರೋಪಿಗಳನ್ನು ಶಿಪ್ಟ್ ಮಾಡಲಾಗಿದೆ.