ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರ ಇಡೀ ಕರ್ನಾಟಕದಲ್ಲಿ ಭಾರಿ ಪೈಪೋಟಿಯ ಕ್ಷೇತ್ರವಾಗಿ ಪರಿಣಮಿಸಿದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಈ ಬಾರಿ ಮತದಾನ ಗುರುಗಳು ಯಾವ ಅಭ್ಯರ್ಥಿಯ ಕೈಯನ್ನು ಹಿಡಿಯುತ್ತಾರೆ ಎಂಬ ಕುತೂಹಲ ಇಡೀ ಕರ್ನಾಟಕ ರಾಜ್ಯದ ಜನತೆಯಲ್ಲಿ ಕೆರಳಿಸಿದೆ. ಇದನ್ನೂ ಓದಿ: ಮೈಸೂರು-ಕೊಡಗು ಕ್ಷೇತ್ರದಲ್ಲಿ ಒಡೆಯರ್ ಗೆಲುವು ಖಚಿತ..!
ಹೌದು ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಕಣದಲ್ಲಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಗ ಬಿವೈ ರಾಘವೇಂದ್ರ ಅವರು ಕಣದಲ್ಲಿದ್ದು , ಇದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಕೂಡ ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.
ಈಗಾಗಲೇ ಮಾಹಿತಿಗಳ ಪ್ರಕಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಅವರು ಬಹುಮತಗಳ ಅಂತರವನ್ನು ಕಾಪಾಡಿಕೊಂಡಿದ್ದಾರೆ.
ಹಾಗಾದ್ರೆ ಈ ಬಾರಿಯೂ ಕೂಡ ಹಾಲಿ ಸಂಸದ ಬಿ ವೈ ರಾಘವೇಂದ್ರ ಅವರೇ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುತಾರ ಕಾದು ನೋಡಬೇಕಿದೆ.