ಮಂಡ್ಯ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದ ಕ್ಷೆತ್ರದಲ್ಲಿ ಜೆಡಿಎಸ್ ನ ಅಭ್ಯರ್ಥಿಯಾಗಿರುವ ಎಚ್ ಡಿ ಕುಮಾರಸ್ವಾಮಿ ಅವರು ಈ ಬಾರಿ ಸುಮಾರು ಒಂದು ಲಕ್ಷ ಅಂತರಗಳಲ್ಲಿ ಬಹುಮತ ಸಾಧಿಸಿದ್ದಾರೆ.
ಈಗಾಗಲೇ ಬಹುಮತಗಳಿಂದ ಮುನ್ನಡೆಯಲ್ಲಿರುವ ಎಚ್ ಡಿ ಕುಮಾರಸ್ವಾಮಿ ಅವರು ಕೇವಲ ಅಧಿಕೃತವಾಗಿ ಘೋಷಣೆ ಮಾಡುವುದು ಒಂದೇ ಬಾಕಿ ಉಳಿದಿದೆ.
ಹೌದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಭರ್ಜರಿ ಜಯಭೇರಿಯನ್ನು ಬಾರಿಸಿದ್ದಾರೆ. ಇದನ್ನೂಓದಿ: ಶಿವಮೊಗ್ಗ ಕ್ಷೇತ್ರದಲ್ಲಿ ಗೆಲ್ಲೋರು ಯಾರು..?
ಕಳೆದ ಬಾರಿ ಸುಮಲತಾ ಅಂಬರೀಶ್ ವಿರುದ್ಧ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಸೋಲುಂಡಿದ್ದರು. ಈ ಬಾರಿಯಾದರೂ ಪುತ್ರನಿಗೆ ಟಿಕೆಟ್ ಕೊಡಿಸಿ ಗೆಲ್ಲಿಸೋಣ ಅಂದುಕೊಂಡಿದ್ದ ಹೆಚ್ಡಿಕೆ ಪಾಲಿಗೇ ಮಂಡ್ಯ ಕ್ಷೇತ್ರದ ಟಿಕೆಟ್ ಒಲಿಯಿತು. ಬಿಜೆಪಿ ಹೈಕಮಾಂಡ್ ನಡೆಸಿ ಹಲವು ಕಸರತ್ತುಗಳ ಬಳಿಕ ಸುಮಲತಾ ಅಂಬರೀಶ್ ಅವರು ಕೊನೆಗೂ ಸ್ಪರ್ಧೆಯಿಂದ ಹಿಂದೆ ಸರಿಯಲು ಒಪ್ಪಿದ್ದರು. ಇದರಿಂದ ಹೆಚ್ಡಿಕೆ ಹಾದಿ ಸುಗಮವಾಯಿತು.
ಕುಮಾರಸ್ವಾಮಿಯವರ ಪ್ರತಿಸ್ಪರ್ಧಿಯಾಗಿ ಸ್ಟಾರ್ ಚಂದ್ರು ಎಂದೇ ಖ್ಯಾತರಾಗಿರುವ ವೆಂಕಟರಮಣೇಗೌಡ ಪೈಪೋಟಿ ನೀಡಿದ್ದು ಸೋಲು ಗೆಲುವಿನ ಲೆಕ್ಕಾಚಾರ ಇನ್ನಷ್ಟೇ ತಿಳಿಯಲಿದೆ. ಪ್ರಸ್ತುತ ಸ್ಟಾರ್ ಚಂದ್ರು ಹಿನ್ನಡೆಯಲ್ಲಿದ್ದಾರೆ. ಈ ಹಿಂದೆಯೂ 2013 ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆ ಆಗಿ ಒಂದು ಬಾರಿ ಸಂಸತ್ ಭವನದ ಮೆಟ್ಟಿಲೇರಿದ್ದ ಕುಮಾರಸ್ವಾಮಿ ಈಗ ಮತ್ತೆ ಮಂಡ್ಯದಿಂದ ಸ್ಪರ್ಧಿಸಿದ್ದು, ಸಕ್ಕರೆ ನಾಡಿನ ಜನರ ತೀರ್ಪು ಯಾರ ಪರ ಅನ್ನೋದು ಕಾದು ನೋಡುಬೇಕಿದೆ.