ರಾಮನಗರ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸುಮಾರು ಲಕ್ಷ ಮತಗಳ ಅಂತರದಲ್ಲಿ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.
ಗೆಲುವು ಸಾಧಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಬೆಂಗಳೂರು ಗ್ರಾಮಾಂತರ ಜನ ಅಣ್ಣ ತಮ್ಮಂದಿರ ದಬ್ಬಾಳಿಕೆಗೆ ಸರಿಯಾಗಿ ಉತ್ತರ ನೀಡಿದ್ದಾರೆ ಎಂದು ಡಿಕೆ ಬ್ರದರ್ಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮತದಾರ ಪ್ರಭುಗಳು ಕೊಟ್ಟಿರುವ ತಿರ್ಮಾನವನ್ನು ಸ್ವಾಗತಿಸುತ್ತೇನೆ: ಡಿಕೆ ಸುರೇಶ್
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ ಮಂಜುನಾಥ್ ಅವರ ಗೆಲುವು ಹೆಚ್ಚು ಮಹತ್ವದ್ದಾಗಿದೆ. ಅಮಿತ್ ಶಾ ಮತ್ತು ತಾನು ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದಾಗ ಜನ ಟೀಕೆ ಮಾಡಿದರು. ಕ್ಷೇತ್ರದಲ್ಲಿ ಅಣ್ಣತಮ್ಮಂದಿರ ದಬ್ಬಾಳಿಕೆಯಿಂದ ಜನ ಬೇಸತ್ತಿದ್ದರು ಮತ್ತು ಡಾ ಮಂಜುನಾಥ್ ಅವರನ್ನು ಗೆಲ್ಲಿಸುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ಹೇಳಿದರು. ಕೇಂದ್ರದಲ್ಲಿ ನಿಶ್ಚಿತವಾಗಿ ಎನ್ ಡಿಎ ಸರ್ಕಾರ ರಚಿಸಲಿದೆ ಮತ್ತು ನರೇಂದ್ರ ಮೋದಿಯವರು ಮೂರನೇ ಬಾರಿಗೆ ದೇಶದ ಪ್ರಧಾನಿ ಮಂತ್ರಿಯಾಗಲಿದ್ದಾರೆ ಎಂದು ಹೇಳಿದ ಕುಮಾರಸ್ವಾಮಿ ಅವರು ಹೇಳಿದ್ದಾರೆ.