ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯುತ್ತಿರುವ ಕಟ್ಟಡ

  • In Crime
  • October 18, 2023
  • 131 Views
ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯುತ್ತಿರುವ ಕಟ್ಟಡ

ಬೆಂಗಳೂರು: ಬೆಂಗಳೂರಿನ ಕೋರಮಂಗಲದ ಬಳಿ ಅಗ್ನಿ ಅವಘಡ ಸಂಭವಿಸಿದೆ. ನಗರದ ಶೋರೂಮ್ ಒಂದರಲ್ಲಿ ಅಗ್ನಿ ಅವಘಡ ಸಮಿಸಿದ್ದು ಶೋರೂಮ್ನಲ್ಲಿದ್ದ ಜನರು ಪ್ರಾಣ ಉಳಿಸಿಕೊಳ್ಳಲು ಹರ ಸಾಹಸ ಪಡುತ್ತಿದ್ದಾರೆ.

ಶೋರೂಮ್ನಲ್ಲಿದ್ದ ಸಿಲಿಂಡರ್ ಗಳು ಬ್ಲಾಸ್ಟ್ ಆಗಿದ್ದು ಕಟ್ಟಡ ಬೆಂಕಿಗೆ ಆಹುತಿಯಾಗಿದೆ. ಬಾರಿ ಪ್ರಮಾಣದಲ್ಲಿ ಅಗ್ನಿ ಆವರಿಸಿಕೊಂಡ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.

ಇನ್ನು ನೇಪಾಳ ಮೂಲದ ಪ್ರೇಮ್ ಸಿಂಗನ್ನುವರು ತಮ್ಮ ಪ್ರಾಣ ಉಳಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಕೆಳಕ್ಕೆ ಹಾರಿದ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಸಿಬ್ಬಂದಿಗಳು ತಿಳಿಸಿದ್ದಾರೆ.

ಅಕ್ಕ ಪಕ್ಕದ ಕಟ್ಟಡ ನಿವಾಸಿಗಳಿಗೂ ಸ್ಥಳಾಂತರ ಮಾಡಲಾಗುತ್ತಿದೆ. ಬೆಂಕಿಯನ್ನು ನಂದಿಸಲು ಹರಸಾಹಸ ಪಡುವಂತ ಪರಿಸ್ಥಿತಿ ಎದುರಾಗಿದೆ. ಕೋರಮಂಗಲದ ತಾವರೆಕೆರೆ ರಸ್ತೆಯ ಬಳಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಸಿದ್ದುಗುಂಟೆಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಕಿ ಅವಘಡದಿಂದ ಸುತ್ತಮುತ್ತಲು ದಟ್ಟವಾದ ಹೊಗೆ ಅವರಿಸಿಕೊಂಡಿದ್ದು, ಸುತ್ತಮುತ್ತಲಿನ ಜನರು ಆತಂಕ ಕೊಳಗಾಗಿದ್ದಾರೆ. ಕೋರಮಂಗಲ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಢ. ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾಗಿರುವ ಬೈಕ್ ಸ್ಕೂಟರ್, ಕಾರ್ ಗಳು. ಕಟ್ಟಡದ ಕೆಳಗೆ ಪಾರ್ಕ್ ಮಾಡಿದ್ದ ವಾಹನಗಳು ಸಂಪೂರ್ಣ ಭಸ್ಮವಾಗಿದ್ದು ಸ್ಥಳದಲ್ಲಿ ಐದು ಅಗ್ನಿ ಶಾಮಕ ದಳದ ವಾಹನಗಳಿಂದ ಕಾರ್ಯಾಚರಣೆ ಮಾಡುತ್ತಿದ್ದಾರೆ.

Related