ಜೀವನ್ಮರಣದಲ್ಲಿ ಹೋರಾಟ ನಡೆಸುತ್ತಿರುವ ಪೌರಕಾರ್ಮಿಕ

ಜೀವನ್ಮರಣದಲ್ಲಿ ಹೋರಾಟ ನಡೆಸುತ್ತಿರುವ ಪೌರಕಾರ್ಮಿಕ

ಇಂಡಿ : ಡ್ರೈನೇಜ್ ಕುಸಿದು ಪೌರಕಾರ್ಮಿಕ ಜೀವನ್ಮರಣದಲ್ಲಿ ಹೋರಾಟ ನಡೆಸುತ್ತಿರುವ ಘಟನೆ ವಿಜಯಪುರ ತಾಲ್ಲೂಕಿನ ಇಂಡಿ ಪಟ್ಟಣದ 17ನೇ ವಾರ್ಡ್ನಲ್ಲಿ ನಡೆದಿದೆ.

42 ವರ್ಷದ ಪೌರ ಕಾರ್ಮಿಕ ಅಶೋಕ್ ಕಡಿಮನಿ ವಾರ್ಡ್ ನಂ.17 ರಲ್ಲಿ ಶುಚಿತ್ವ ಕಾರ್ಯದಲ್ಲಿ ತೊಡಗಿದ್ದಾಗ ಈ ಘಟನೆ ಸಂಭವಿಸಿದೆ.

ಅಸ್ವಸ್ಥಗೊಂಡಿರುವ ಅಶೋಕ್‌ನನ್ನು ಹೆಚ್ಚಿನ ತುರ್ತು ಚಿಕಿತ್ಸೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಇಂಡಿ ನಗರ ಪೋಲಿಸ್ ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Related