ಸಾಲ ಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ

ಸಾಲ ಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ

ಸುರಪುರ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸಾಲ ಮಾಡಿಕೊಂಡು ತೀರಿಸಲಾಗದೆ ಮನನೊಂದು ಕ್ರಿಮಿನಾಶಕ ಸೇವಿಸಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ರೈತ ನಿಂಗಪ್ಪ ತಂದೆ ತಿಮ್ಮಯ್ಯ ಯಾದವ್(35) ಎನ್ನುವವರು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗ್ರಾಮದಲ್ಲಿ ಸುಮಾರು ಹತ್ತು ಲಕ್ಷ ರೂ. ಕೈ ಸಾಲ ಹಾಗೂ ಬ್ಯಾಂಕಿನಲ್ಲಿ ಒಂದು ಲಕ್ಷ ರೂ. ಸಾಲ ಮಾಡಿದ್ದು ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದರು.

ರೈತ 1.5 ಎಕರೆ ಜಮೀನು ಹೊಂದಿದ್ದು ಸಮಯಕ್ಕೆ ಸರಿಯಾಗಿ ಬೆಳೆ ಕೈ ಕೊಟ್ಟ ಪರಿಣಾಮ ಆತ್ಮಹತ್ಯೆ ದಾರಿ ತುಳಿದಿದ್ದಾನೆ ಎನ್ನಲಾಗಿದೆ.
ಮೃತ ರೈತ ಇಬ್ಬರು ಪತ್ನಿಯರು ಹಾಗೂ ಐದು ಜನ ಮಕ್ಕಳನ್ನು ಅಗಲಿದ್ದು ಕುಟುಂಬಸ್ಥರಿಗೆ ಆಕ್ರಂದನ ಮುಗಿಲು ಮುಟ್ಟಿದೆ.

ಸುರಪುರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related