ಗಣಿ ಧಣಿ ಕುಟೀರಕ್ಕೆ ಬೆಂಕಿ

ಗಣಿ ಧಣಿ ಕುಟೀರಕ್ಕೆ ಬೆಂಕಿ

ಕೊಪ್ಪಳ: ಗಣಿ ಧಣಿ ಜನಾರ್ದನ್ ರೆಡ್ಡಿ ಅವರ ಕುಟೀರಕೆ ಇಂದು ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಅವರು ಅಂಜನಾದ್ರಿ ಪಂಪ ಸರೋವರಕ್ಕೆ ಭೇಟಿ ನೀಡುತ್ತಿದ್ದ ಸಂದರ್ಭದಲ್ಲಿ ಈ ಕುಟೀರದಲ್ಲಿ ಅವರ ಕುಟುಂಬ ಸಮೇತ ವಾಸ್ತವ ಹೂಡುತ್ತಿದ್ದರೆ ಎಂದು ತಿಳಿದುಬಂದಿದೆ.

ಇಂದು ಸುಮಾರು ಮಧ್ಯಾಹ್ನ 12 ಗಂಟೆಗೆ ಬೆಂಕಿ ತಗುಲಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಹೇಳಲಾಗುತ್ತಿದೆ. ಆದರೆ ಇದು ಶಾರ್ಟ್ ಸರ್ಕ್ಯೂಟ್ ನಿಂದ ಆಗಿರುವ ಘಟನೆಯಲ್ಲಾ, ಇದು ಯಾರೋ ಬೇಕು ಅಂತಲೇ ಬೆಂಕಿಯನ್ನು ಹಾಕಿದ್ದಾರೆ ಎಂದು ಶಾಸಕ ಜನಾರ್ಧನ್ ರೆಡ್ಡಿ ಅವರ ಆಪ್ತರು ಹೇಳುತ್ತಿದ್ದಾರೆ.

ಹೌದಯ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ಕುಟೀರಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಹೊತ್ತಿ ಉರದಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪಂಪಾ ಸರೋವರದಲ್ಲಿ ನಡೆದಿದೆ.

ಇನ್ನು ಕುಟಿರದೊಳಗೆ ಎಸಿ ಸೇರಿದಂತೆ ಆಧುನಿಕ ಅನೇಕ ಸೌಕರ್ಯಗಳು ಇದ್ದವು. ಆದರೆ ಇಂದು ಮಧ್ಯಾಹ್ನ12 ಗಂಟೆ ಸಮಯದಲ್ಲಿ ಕುಟಿರಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕುಟಿರ ಸುಟ್ಟು ಭಸ್ಮವಾಗಿದೆ. ಕುಟಿರದ ಮೇಲೆ ಹುಲ್ಲಿನ ಹೊದಿಕೆ ಹೊದೆಸಲಾಗಿತ್ತು. ಹೀಗಾಗಿ ಬೆಂಕಿ ಇಡೀ ಕುಟಿರವನ್ನು ಆವಸರಿಸಿಕೊಂಡಿದ್ದರಿಂದ ಕುಟಿರ ಅಗ್ನಿಗಾಹುತಿಯಾಗಿದೆ.

 

Related