ಬೆಂಗಳೂರು: ಬೆಂಗಳೂರು ಗ್ರಾಮಾಂತರ ಆನೇಕಲ್ ತಾಲ್ಲೂಕಿನಲ್ಲಿ ಪಟಾಕಿ ಅಂಗಡಿಗೆ ಬೆಂಕಿ ತಗೊಳ್ಳಿದ್ದು 10 ಜನ ಜೀವಂತ ಸುಟ್ಟು ಕರಕಲಾಗಿರುವ ಘಟನೆ ಇಂದು ನಡೆದಿದೆ.
ಮಳಿಗೆಯಲ್ಲಿ ಪತ್ತೆಯಾದ 10 ಕಾರ್ಮಿಕರ ಮೃತದೇಹಗಳನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಳಿಗೆಯಲ್ಲಿ ಸುಮಾರು 20 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದಂತೆ, ಪಟಾಕಿ ಅನ್ ಲೋಡ್ ಮಾಡುವ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. 15 ಮಂದಿ ಪಟಾಕಿ ಸ್ಪೋಟಗೊಳ್ಳುತ್ತಿದ್ದಂತೆ ಹೊರ ಬಂದದ್ದು, ಉಳಿದ ಐವರು ನಾಪತ್ತೆಯಾಗಿದ್ದರು. ಗೋದಾಮು ಮತ್ತು ಮಳಿಗೆಗೆ ಒಂದೇ ಪ್ರವೇಶವಿದ್ದ ಕಾರಣ ಕಾರ್ಮಿಕರು ಗೋದಾಮಿನಿಂದ ಹೊರಕ್ಕೆ ಬರಲಾಗದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕರ್ನಾಟಕ ತಮಿಳುನಾಡು ಗಡಿಯ ಅತ್ತಿಬೆಲೆ ಬಳಿಯ ಬಾಲಾಜಿ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಕಸ್ಮಿಕವಾಗಿ ಬೆಂಕಿ ತಗುಲಿದ್ದು, ವಾಹನದಿಂದ ಪಟಾಕಿ ಆನ್ಲೋಡ್ ಮಾಡುವಾಗ ದುರ್ಘಟನೆ ನಡೆದಿದ್ದು, ಗೋಡನ್ ವರೆಗೂ ವ್ಯಾಪಿಸಿ ಬೆಂಕಿ ಜ್ವಾಲೆ ಹೆಚ್ಚಾಗಿದೆ. ಎರಡು ವಾಹನಗಳು ಸುಟ್ಟು ಕರಕಲಾಗಿದ್ದು, ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.