ಹೆತ್ತ ಕಂದಮ್ಮನನ್ನೇ ಕೊಂದ ತಾಯಿ

ಹೆತ್ತ ಕಂದಮ್ಮನನ್ನೇ ಕೊಂದ ತಾಯಿ

ಚಾಮರಾಜನಗರ : ತನ್ನ ಕರುಳ ಕುಡಿಯನ್ನೇ ಬ್ಲೇಡ್‌ನಿಂದ ಕೊಯ್ದು ಕೊಂದಿದ್ದ ತಾಯಿಗೆ ಚಾಮರಾಜನಗರ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಹನೂರು ತಾಲ್ಲೂಕಿನ ಚಿಕ್ಕಮಾಲಾಪುರದ ಚಂದ್ರಮ್ಮ ಎಂಬಾಕೆ ತನ್ನ ನವಜಾತ ಶಿಶುವನ್ನು ಕೊಂದ ಅಪರಾಧಕ್ಕೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾಳೆ.

ಕಳೆದ ಐದು ವರ್ಷಗಳಿಂದ ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಈಗ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿನಯ್ ಅವರು ಆರೋಪಿ ಚಂದ್ರಮ್ಮಳಿಗೆ ಜೀವಾವಧಿ ಶಿಕ್ಷೆ ಜತೆಗೆ 15 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಹೀಗಾಗಿ ಕರುಳಬಳ್ಳಿ ಕತ್ತರಿಸುವ ಬ್ಲೇಡ್‌ನಿಂದ ಮಗುವನ್ನು ಕೊಲೆ ಮಾಡಿ ಕಾಮಗೆರೆಯ ಕೆರೆಗೆ ಎಸೆದು ಹೋಗಿದ್ದಳು.

ಪ್ರಕರಣ ವಿಚಾರಣೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿನಯ್ ನಡೆಸಿದ ಜಿಲ್ಲಾ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಚಂದ್ರಮ್ಮಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Related