ಲಕ್ನೋ, ಜು 13 : ಗುಂಪೊಂದು ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಜೈ ಶ್ರೀರಾಮ್ ಹಾಗೂ ಭಾರತ್ ಮಾತಾ ಕಿ ಜೈ ಘೋಷಣೆಗಳನ್ನು ಕೂಗಲು ಒತ್ತಾಯಿಸಿದ ಘಟನೆ ಮಥುರಾದಲ್ಲಿ ನಡೆದಿದೆ.
ಮುಬಿನ್ ಅಹ್ಮದ್ ಎಂಬಾತ ಹಸುವಿಗಾಗಿ ಧರ್ಮಪುರ ಕಾಲುವೆಯ ಬಳಿಯ ಪ್ರದೇಶದಲ್ಲಿ ಮೇವನ್ನು ಹುಡುಕುತ್ತಿದ್ದಾಗ ಈ ಘಟನೆ ನಡೆದಿದೆ. ಗುಂಪೊಂದು ಮುಬಿನ್ ಅವರನ್ನು ಅಡ್ಡಗಟ್ಟಿದೆ. ಈ ವೇಳೆ ಮುಬಿನ್ನ್ನು ಜೈ ಶ್ರೀರಾಮ್ ಹಾಗೂ ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ.
ಅಷ್ಟೇ ಅಲ್ಲದೇ ಮುಬಿನ್ನ್ನು ಅವರು ದೇಶದ್ರೋಹಿ ಹಾಗೂ ಉದಯಪುರದಲ್ಲಿ ಕನ್ಹಯ್ಯ ಲಾಲ್ ಹತ್ಯೆಗೆ ಕಾರಣರಾದವರು ಎಂದು ಅವಮಾನಿಸಿದ್ದಾರೆ. ಅಷ್ಟೇ ಅಲ್ಲದೇ ಇದೆಲ್ಲವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಘಟನೆ ಸಂಬಂಧಿಸಿ ಮುಬಿನ್ ಅಹ್ಮದ್ ಮಥುರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ. ವೀಡಿಯೋದ ಆಧಾರದ ಮೇಲೆ ಮಥುರಾ ಪೊಲೀಸರು ಈಗಾಗಲೇ ಓರ್ವನನ್ನು ಬಂಧಿಸಿದ್ದಾರೆ