ಮೈತ್ರಿಯಲ್ಲಿ ಬಿರುಕುಂಟಾಯ್ತಾ?

ಮೈತ್ರಿಯಲ್ಲಿ ಬಿರುಕುಂಟಾಯ್ತಾ?

ರಾಯಚೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷ ಮೈತ್ರಿ ಮಾಡಿಕೊಂಡು ಈಗ ಚುನಾವಣೆಯನ್ನು ಎದುರಿಸುತ್ತಿದೆ.

ಆದರೆ ಇತ್ತೀಚಿಗೆ ರಾಜ್ಯ ರಾಜಕೀಯದಲ್ಲಿ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈ ಪ್ರಕರಣ ರಾಜ್ಯದಲ್ಲಿ  ಹೆಚ್ಚು ಧೂಳೆಬ್ಬಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನನಗೆ ಮೈತ್ರಿ ಮುಖ್ಯವಲ್ಲ ಎಂದು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮೈತ್ರಿ ಏನಾಗಬಹುದು ಎಂದು ಕೇಳಲಾದ ಪ್ರಶ್ನೆಗೆ ಕುಮಾರಸ್ವಾಮಿ, ತನಗೆ ಮೈತ್ರಿ ಮುಖ್ಯ ಅಲ್ಲ ಎಂದು ಹೇಳಿದ್ದಾರೆ.ಪ್ರಜ್ವಲ್ ಪ್ರಕರಣದ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಇದೆಲ್ಲಾ ಕಾಲ ನಿರ್ಧಾರ ಮಾಡುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.

ತಾವು ಪಲಾಯನವಾದ ಮಾಡಲ್ಲ. ಪ್ರಜ್ವಲ್ ಪ್ರಕರಣ ಬೆಳಕಿಗೆ ಬಂದಾಗ ಇದು ಮಾರ್ಫಿಂಗ್ ವಿಡಿಯೋ ಎಂದು ಹೇಳಿದೆವಾ? ಯಾರೆ ತಪ್ಪು ಮಾಡಿದ್ದರೂ ಶಿಕ್ಷೆ ಆಗಲಿ ಎಂದು ಧೈರ್ಯವಾಗಿ ಹೇಳಿದ್ದೇವೆ. ತನಿಖೆ ಆಗಲಿ, ತಪ್ಪಿತಸ್ಥರು ಯಾರೆಂದು ಗೊತ್ತಾಗಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

 

Related