ರಸ್ತೆ ಬದಿ ಇರುವ ಪೈಪು ಹಾಗೂ ಕಟ್ಟಡ ನಿರ್ಮಾಣ ವಸ್ತುಗಳನ್ನು ತೆರವುಗೊಳಿಸಲು ಆದೇಶ

ರಸ್ತೆ ಬದಿ ಇರುವ ಪೈಪು ಹಾಗೂ ಕಟ್ಟಡ ನಿರ್ಮಾಣ ವಸ್ತುಗಳನ್ನು ತೆರವುಗೊಳಿಸಲು ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಹಲವು ಕಡೆಗಳಲ್ಲಿ ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗದಲ್ಲಿ ಕಟ್ಟಡ ನಿರ್ಮಾಣದ ವಸ್ತು ಮತ್ತು ಪೈಪುಗಳಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತಿದೆ. ಆದ್ದರಿಂದ ತಕ್ಷಣದಿಂದ ಆಯಾ ವಲಯದ ಎಲ್ಲಾ ಮುಖ್ಯ ಇಂಜಿನಿಯರ್ ಗಳು ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗದಲ್ಲಿ ಇರುವಂತಹ ಪೈಪು ಹಾಗೂ ಕಟ್ಟಡ ನಿರ್ಮಾಣ ವಸ್ತುಗಳನ್ನು ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ತೆರವುಗೊಳಿಸಿರುವ ಬಗ್ಗೆ ಜಿಯೋ ಟ್ಯಾಗ್ ಫೋಟೊ ಸಮೇತ ವರದಿಯನ್ನು ಎಲ್ಲಾ ವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ದಿನಾಂಕ: 21.08.2022ರ ಸಂಜೆ 4.00 ಘಂಟೆ ಒಳಗಾಗಿ ಪ್ರಧಾನ ಅಭಿಯಂತರರಿಗೆ ವರದಿ ನೀಡಲು ಆದೇಶಿಸಿದೆ. ಇದನ್ನು ತೆರವುಗೊಳಿಸುವಲ್ಲಿ ವಿಫಲವಾದರೆ ಅಥವಾ ವರದಿ ನೀಡದಿದ್ದರೆ ಸಂಬಂಧಪಟ್ಟ ಮುಖ್ಯ ಅಭಿಯಂತರರು ಮತ್ತು ಕಾರ್ಯಪಾಲಕ ಅಭಿಯಂತರರುಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಕಛೇರಿ ಆದೇಶದ ಮೂಲಕ ತಿಳಿಸಿರುತ್ತಾರೆ.

 

Related