ಭೀಕರ ಅಪಘಾತ : ಮೂವರು ಸಾವು

ಭೀಕರ ಅಪಘಾತ : ಮೂವರು ಸಾವು

ಶಿವಮೊಗ್ಗ, ಮಾ. 3 : ಸಾಗರ ತಾಲೂಕು ಕಾಸ್ಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಾತ್ರಿ ನಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾಸ್ಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಸಿದ್ಧಪ್ಪ(40), ಜಿ.ತಿಪ್ಪಣ್ಣ(60), ವೆಂಕಟೇಶ(55) ಎಂದು ಗುರುತಿಸಲಾಗಿದೆ. ಇವರೆಲ್ಲ ರಾಯಚೂರಿನ ಶಕ್ತಿನಗರದ ಕೆಪಿಸಿ ಉದ್ಯೋಗಿಗಳಾಗಿದ್ದಾರೆ. ಎಂದೂ ತಿಳಿದುಬಂದಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ನಾಗರಾಜ್ ಎಂದು ಗುರುತಿಸಲಾಗಿದೆ.

ಕಾರ್ಗಲ್ನಲ್ಲಿ ಖಾಸಗಿ ಕಾರ್ಯಕ್ರಮ ಮುಗಿಸಿ ರಾಯಚೂರಿಗೆ ವಾಪಸ್ಸಾಗುವಾಗ ಈ ಘಟನೆ ನಡೆದಿದೆ. ಈ ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Related