ಯಶ್ ಅಭಿಮಾನಿಗೆ ಬೈಕ್ ಡಿಕ್ಕಿ ಯುವಕ ಸಾವು

ಯಶ್ ಅಭಿಮಾನಿಗೆ ಬೈಕ್ ಡಿಕ್ಕಿ ಯುವಕ ಸಾವು

ಗದಗ: ನಿನ್ನೆ ನಟ ಯಶ್ ಅವರ ಹುಟ್ಟು ಹಬ್ಬದ ಸಂಭ್ರಮಕ್ಕೆಂದು ಅಭಿಮಾನಿಗಳು ಬ್ಯಾನರ್ ಕಟ್ಟುವ ಸಂದರ್ಭದಲ್ಲಿ ವಿದ್ಯುತ್ ತಂತಿ ತಗಲಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿತ್ತು.

ಇನ್ನು ಮೃತ ಕುಟುಂಬಸ್ಥರ ಮನೆಗೆ ನಟ ಯಶ್ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿ ವಾಪಸ್ಸು ಬರುತ್ತಿದ್ದ ಸಂದರ್ಭದಲ್ಲಿ ಯಶ್ ನ ಭದ್ರತೆ ನೀಡುತ್ತಿದ್ದ ಪೊಲೀಸ್ ಗಾಡಿಗೆ ಯುವಕನ ಬೈಕ್ ಡಿಕ್ಕಿಯಾಗಿ ಅಪಘಾತವಾಗಿ ನಿಖಿಲ್ ಎಂಬಾತನಿಗೆ ತಲೆಗೆ ಗಾಯವಾಗಿದ್ದ ಪರಿಣಾಮ ನಿನ್ನೆ  ರಾತ್ರಿ ನಿಖಿಲನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಖಿಲ್ ಇಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತ ನಿಖಿಲ್​​​ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿವಾಸಿಯಾಗಿದ್ದರು.

ಇನ್ನು ಘಟನೆ ಸಂಬಂಧ ಗದಗ ಎಸ್​​ಪಿ ಬಿ.ಎಸ್​.ನೇಮಗೌಡ ಮಾತನಾಡಿದ್ದು, ಬೈಕ್​ಗೆ ಡಿಕ್ಕಿ ಹೊಡೆದ ಜೀಪ್ ಯಶ್ ಬೆಂಗಾವಲು ವಾಹನ ಅಲ್ಲ. ಅದು ಪೊಲೀಸ್ ಹೆಡ್ ಕ್ವಾಟರ್​ಗೆ ಹೋಗುವ ಪೊಲೀಸ್ ಜೀಪ್. ನಟ ಯಶ್ ಅವರನ್ನು ಬೈಪಾಸ್ ಹೈವೇ ಯಿಂದಲೇ ಹುಬ್ಬಳ್ಳಿಗೆ ಕಳಿಸಲಾಗಿದೆ. ನಟ ಯಶ್ ಅವರ ಬೆಂಗಾವಲು ವಾಹನಕ್ಕೂ ಈ ಅಪಘಾತಕ್ಕೂ ಸಂಬಂಧವಿಲ್ಲ. ನಟ ಯಶ್ ಬೆಂಗಾವಲು ವಾಹನ ಡಿಕ್ಕಿಯಾಗಿಲ್ಲ ಎಂದು ತಿಳಿಸಿದ್ದಾರೆ.

 

Related