ಯುವಕ ಜಲ ಸಮಾಧಿ

ಯುವಕ ಜಲ ಸಮಾಧಿ

ಹಾವೇರಿ, ಫೆ.6 : ಗ್ರಾಮದೇವತೆ ಜಾತ್ರೆಗೆ ಬಂದಿದ್ದ ಯುವಕನೋರ್ವ ಸ್ನಾನಕ್ಕೆಂದು ತುಂಗಭದ್ರಾ ನದಿಗೆ ಇಳಿದು ನೀರು ಪಾಲಾದ ಘಟನೆ ಹಾವೇರಿ ತಾಲೂಕಿನ ಹಾವನೂರು ಗ್ರಾಮದ ಬಳಿ ನಡೆದಿದೆ.
ಮೃತ ಯುವಕನನ್ನ ಮಂಜುನಾಥ ಕಾಸಿಕೋವಿ(19) ಎಂದು ಗುರುತಿಸಲಾಗಿದೆ. ಮಂಜುನಾಥ ಮೂಲತಃ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಸೂರಣಗಿ ಗ್ರಾಮದ ನಿವಾಸಿ ಎನ್ನಲಾಗಿದೆ. ಬುಧವಾರ ಹಾವನೂರು ಗ್ರಾಮದೇವತೆ ಜಾತ್ರೆಗೆ ಬಂದಿದ್ದ ಯುವಕ ಸ್ನಾನಕ್ಕೆಂದು ತುಂಗಭದ್ರಾ ನದಿಯಲ್ಲಿ ಇಳಿದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಯುವಕನ ಮೃತದೇಹವನ್ನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ನೆರವಿನಿಂದ ಹೊರತಗೆದಿದ್ದಾರೆ.
ಸ್ಥಳಕ್ಕೆ ಹಾವೇರಿ ತಹಶೀಲ್ದಾರ್ ಶಂಕರ್ ಹಾಗೂ ಗುತ್ತಲ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಗುತ್ತಲ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Related