ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ಗೆ ಕಿಡಿಗೇಡಿ ಮಸಿ ಬಳಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿದ್ದು ಖಂಡನೀಯ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ನಾಯಕನ ಮೇಲೆ ಹಲ್ಲೆ ಖಂಡನೀಯ. ಅವರು ರೈತರ ಸಮಸ್ಯೆ ಬಗ್ಗೆ ಸುದ್ದಿಗೋಷ್ಟಿ ಕರೆದಿದ್ದರು.ಆ ವೇಳೆ ಕಿಡಿಗೇಡಿಗಳು ಅಟ್ಯಾಕ್ ಮಾಡಿದ್ದು ಸರಿಯಲ್ಲ. ಅವರ ಮುಖಕ್ಕೆ ಮಸಿ ಬಳಿದಿದ್ದು ಖಂಡನೀಯ.
ಒಬ್ಬ ರೈತನಾಯಕನಿಗೆ ಹೀಗೆ ಮಾಡುತ್ತಾರೆ ಅಂದ್ರೆ ಹೇಗೆ..? ಅವರಿಗೆ ಮಸಿ ಬಳಿಯೋದು ರೈತರಿಗೆ ಮಾಡಿದ ಅಪಮಾನ. ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಕೂಡಲೇ ಕಿಡಿಗೇಡಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದಿದ್ದಾರೆ.