ಕ್ಲೀನ್‌ ಚಿಟ್‌ ಖಂಡಿಸಿ ಎಎಪಿ ಪ್ರತಿಭಟನೆ..

ಕ್ಲೀನ್‌ ಚಿಟ್‌ ಖಂಡಿಸಿ ಎಎಪಿ ಪ್ರತಿಭಟನೆ..

ಗುತ್ತಿಗೆದಾರ ಸಂತೋಷ್ಪಾಟೀಲ್ಆತ್ಮಹತ್ಯೆಗೆ ಸಂಬಂಧಿಸಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಕ್ಲೀನ್ಚಿಟ್ನೀಡಿರುವ ಪೊಲೀಸರ ನಡೆಯನ್ನು ಖಂಡಿಸಿ ಆಮ್ಆದ್ಮಿ ಪಾರ್ಟಿಯು ಬೃಹತ್ಪ್ರತಿಭಟನೆ ನಡೆಸಿತು.

ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಎಎಪಿಯ ಬೆಂಗಳೂರು ನಗರ ರಾಜಕೀಯ ಚಟುವಟಿಕೆಗಳ ಅಧ್ಯಕ್ಷ ಚನ್ನಪ್ಪ ಗೌಡ ನೆಲ್ಲೂರು, “ಕಳಂಕಿತ ಸಚಿವ ಈಶ್ವರಪ್ಪರನ್ನು ಪುನಃ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರ ಹುನ್ನಾರ ಮಾಡಿದ್ದಿದ್ದು, ಇದಕ್ಕಾಗಿಯೇ ಪೊಲೀಸರ ಮೇಲೆ ಒತ್ತಡ ಹೇರಿ ಕ್ಲೀನ್ಚಿಟ್ಕೊಡಿಸಿದೆ.

ಸಂತೋಷ್ಪಾಟೀಲ್ಆತ್ಮಹತ್ಯೆಗೂ ಮುನ್ನ ಸಂತೋಷ್ರವರು ಈಶ್ವರಪ್ಪ ವಿರುದ್ಧ ವಾಟ್ಸಪ್ನಲ್ಲಿ ಡೆತ್ನೋಟ್ಕಳುಹಿಸಿರುವುದನ್ನು ಪೊಲೀಸರೇ ದೃಢಪಡಿಸಿದ್ದಾರೆ. ಆದರೂ ಕೂಡ ಈಶ್ವರಪ್ಪನವರ ವಿಚಾರಣೆಯನ್ನೂ ನಡೆಸದೇ ಕ್ಲೀನ್ಚಿಟ್ನೀಡಿರುವುದು ಖಂಡನೀಯ. ಅಕ್ರಮ ಎಸಗುವವರ ಪರವಾಗಿದ್ದೇವೆ ಎಂಬ ಕೆಟ್ಟ ಸಂದೇಶವನ್ನು ರಾಜ್ಯ ಬಿಜೆಪಿ ಸರ್ಕಾರ ಈ ಮೂಲಕ ರವಾನಿಸಿದೆ” ಎಂದು ಹೇಳಿದರು.

“ಘಟನೆ ನಡೆದಾಗಲೇ ಈಶ್ವರಪ್ಪನವರ ಬೆನ್ನಿಗೆ ನಿಂತಿದ್ದ ಬಿಜೆಪಿ ಸರ್ಕಾರವು, ತನಿಖೆಗೂ ಮುನ್ನವೇ ಈಶ್ವರಪ್ಪನವರನ್ನು ನಿರಪರಾಧಿ ಎಂದು ಘೋಷಿಸಿತ್ತು. ನಂತರ ಆಮ್ಆದ್ಮಿ ಪಾರ್ಟಿಯು ಸಿಎಂ ಮನೆಗೆ ಮುತ್ತಿಗೆ ಹಾಕಲು ಮುಂದಾದಾಗ ಈಶ್ವರಪ್ಪನವರ ರಾಜೀನಾಮೆ ಪಡೆದಿತ್ತು. ಆದರೆ ಕೇವಲ ಕಾಟಾಚಾರಕ್ಕೆ ತನಿಖೆ ನಡೆಸಿ ಸಂತೋಷ್ಪಾಟೀಲ್ರವರ ಕುಟುಂಬಕ್ಕೆ ಅನ್ಯಾಯವೆಸಗಿದೆ.

ರಾಜಕೀಯ ಒತ್ತಡಕ್ಕೆ ಮಣಿದ ಉಡುಪಿ ಪೊಲೀಸರು ಈಶ್ವರಪ್ಪನವರ ವಿಚಾರಣೆ ನಡೆಸದೇ ಕೇವಲ ಮೂರು ತಿಂಗಳಲ್ಲಿ ವರದಿ ಸಿದ್ಧಪಡಿಸಿದ್ದಾರೆ. ರಾಜ್ಯ ಪೊಲೀಸ್ಇಲಾಖೆಯು ಈ ದೋಷಪೂರಿತ ವರದಿಯನ್ನು ಹಿಂಪಡೆಯಬೇಕು” ಎಂದು ಚನ್ನಪ್ಪಗೌಡ ನೆಲ್ಲೂರು ಆಗ್ರಹಿಸಿದರು.

Related