ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಎಸಿಬಿ ಅಧಿಕಾರಿಗಳ ತಂಡ ಬುಧವಾರ ಬೆಳಗಿನ ಜಾವ ನಗರದ ಹಗ್ಗೇರಿ ಕಾಲನಿಯ ಕೋಟಿಲಿಂಗೇಶ್ವರ ನಗರದಲ್ಲಿರುವ ಕೆಐಡಿಬಿ ಸಹಾಯಕ ಕಾರ್ಯದರ್ಶಿ ಮನೆ ಮೇಲೆ ದಾಳಿ ನಡೆಸಿದರು.
ಬೆಂಗಳೂರಿನ ಕೆಐಡಿಬಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹರೀಶ ಹಳೇಪೇಟ್ ಎಂಬುವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ತಾಸಿಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿದರು.
ಬೆಂಗಳೂರಿನ ಎಸಿಬಿ ಅಧಿಕಾರಿಗಳಿಂದ ಮಾಹಿತಿ ಪಡೆದು ದಾಳಿ ನಡೆಸಿದ ಧಾರವಾಡ ಎಸಿಬಿ ಅಧಿಕಾರಿಗಳು, ಅನೇಕ ಮಹತ್ವಪೂರ್ಣ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಎಸಿಬಿ ತಂಡ ಏಕಕಾಲಕ್ಕೆ ದಾಳಿ ನಡೆಸಿ ಅನೇಕ ಮಹತ್ವಪೂರ್ಣ ಮಾಹಿತಿಗಳನ್ನು ಕಲೆ ಹಾಕಿದೆ ಎಂದು ನಂಬಲಾರ್ಹ ಮೂಲಗಳಿಂದ ತಿಳಿದು ಬಂದಿದೆ.