ಎಸಿಬಿ ಬಲೆಗೆ ಬಿದ್ದ ಕಂಪ್ಯೂಟರ್ ಆಪರೇಟರ್

ಎಸಿಬಿ ಬಲೆಗೆ ಬಿದ್ದ ಕಂಪ್ಯೂಟರ್ ಆಪರೇಟರ್

ಗದಗ : ಜಿಲ್ಲೆಯ ಶಿರಹಟ್ಟಿ ಪ.ಪಂ ಕಂಪ್ಯೂಟರ್ ದಾಖಲೆ ನೀಡಲು ಲಂಚ ಪಡೆಯುತ್ತಿದ್ದ ಕಂಪ್ಯೂಟರ್ ಆಪರೇಟರ್ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಸ್ಥಳೀಯ ನಿವಾಸಿಯೊಬ್ಬರು ತಮ್ಮ ಆಸ್ತಿಯ ಖಾತಾ ಬದಲಾವಣೆ ಮಾಡಿ ಕಂಪ್ಯೂಟರ್ ಉತಾರ ನೀಡುವಂತೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಸಲ್ಲಿಸಿ ಹಲವು ತಿಂಗಳು ಕಳೆದರೂ, ಉತಾರ ಒದಗಿಸಿರಲಿಲ್ಲ. ಉತಾರ ನೀಡಲು 3.500 ರೂ. ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು.

ಈ ಕುರಿತು ಅರ್ಜಿದಾರನ ದೂರಿನ ಮೇರೆಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಆರೋಪಿ ಶರಣಪ್ಪ ಗೌಳಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಎಸಿಬಿ ಡಿವೈಎಸ್ಪಿ ಎನ್.ವಾಸುದೇವ ರಾಮ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

Related