ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್

ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್

ಯಾದಗಿರಿ : ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದೆ. ಬೆಳ್ಳಂಬೆಳಗ್ಗೆ ಯಾದಗಿರಿ ಕೆಇಬಿ ಲೆಕ್ಕಾಧಿಕಾರಿ ರಾಜು ಪತ್ತಾರ ಎಂಬುವರ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದ್ದು, ಅಕ್ರಮ ಸಂಪತ್ತು ಶೋಧಿಸಲು ಮುಂದಾಗಿದೆ.

ಕಳೆದ 20 ವರ್ಷದಿಂದ ಯಾದಗಿರಿ ಕೆಇಬಿ ಕಚೇರಿಯಲ್ಲಿ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ರಾಜು ಪತ್ತಾರ ಮೇಲೆ, ಆದಾಯಕ್ಕೂ ಮೀರಿ ಆಸ್ತಿ ಹೊಂದಿದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಯಾದಗಿರಿ ನಗರದ ಸಹರಾ ಕಾಲೋನಿ ನಿವಾಸಿ ಮೇಲೆ ಎಸಿಬಿ ದಾಳಿ ನಡೆಸಿದೆ.

ದಾಳಿಯಲ್ಲಿ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ ಎಂದು ಹೇಳಲಾಗುತ್ತದೆ. ಎಸಿಬಿ ಎಸ್‌ಪಿ ಮಹೇಶ ಮೇಗಣ್ಣನವರ್ ಹಾಗೂ ಡಿವೈಎಸ್‌ಪಿ ಉಮಾಶಂಕರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

Related