ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್!

ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್!

ಬೆಂಗಳೂರು : ರಾಜ್ಯಾದ್ಯಂತ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ.

ಬೆಂಗಳೂರು, ಮೈಸೂರು, ಬೆಳಗಾವಿ, ಯಾದಗಿರಿ ಸೇರಿ ರಾಜ್ಯಾದ್ಯಂತ 11 ಕಡೆ ಎಸಿಬಿ ದಾಳಿ ನಡೆಸಿದ್ದು, ದಾಖಲೆಗಳನ್ನ ಪರಿಶೀಲಿಸುತ್ತಿದೆ.

ಬೆಂಗಳೂರಿನ ಬಿಬಿಎಂಪಿ ಜೂನಿಯರ್ ಇಂಜಿನಿಯರ್ ಸುಭ್ರಮಣಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕೆ ಮೀರಿ ಆಸ್ತಿಗಳಿಕೆ ಹಿನ್ನೆಲೆ ಎಸಿಬಿ ರೈಡ್ ಮಾಡಿದೆ ಅಂತ ತಿಳಿದುಬಂದಿದೆ.

ಮೈಸೂರಿನ ಚೆಸ್ಕಾಂ ಸೂಪರಿಡೆಂಟ್ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು, ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲಿಸುತ್ತಿದ್ದಾರೆ.

ಬೆಳಗಾವಿಯ ಉಪಮುಖ್ಯ ವಿದ್ಯುತ್ ಪರಿವೀಕ್ಷಕರ ಮನೆ, ಕಚೇರಿ ಮೇಲೆ ಏಕಕಾಲಕ್ಕೆ ನಾಲ್ಕು ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಯಾದಗಿರಿಯ ಜೆಸ್ಕಾಂ ಅಧಿಕಾರಿಗೆ ಎಸಿಬಿ ಶಾಕ್ ನೀಡಿದ್ದು, ಜೆಸ್ಕಾಂ ಅಧಿಕಾರಿ ರಾಜು ಪತ್ತಾರ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ.

Related