ಟಿಟಿ ಡಿಕ್ಕಿ ಇಬ್ಬರು ಸಾವು..!

ಟಿಟಿ ಡಿಕ್ಕಿ ಇಬ್ಬರು ಸಾವು..!

ಜಿಲ್ಲೆಯ ಕುಣಿಗಲ್ ಪಟ್ಟಣದ ಬೇಗೂರು ಬ್ರಿಡ್ಜ್ ಬಳಿ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇನೋವಾ ಕಾರು ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಿಟಿ ವಾಹನದಲ್ಲಿದ್ದ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 2 ಜನರ ಸ್ಥಿತಿ ಗಂಭೀರವಾಗಿದೆ.

ಶನಿವಾರ ಬೆಳಗ್ಗೆ ಬೆಂಗಳೂರು ಕಡೆಯಿಂದ ಹಾಸನ ಕಡೆಗೆ ಇನೋವಾ ಕಾರು ತೆರಳುತಿತ್ತು. ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಟಿಟಿ ವಾಹನ ಬರುತಿತ್ತು. ಮಾರ್ಗಮಧ್ಯೆ ಬೇಗೂರು ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಡಿವೈಡರ್ ದಾಟಿ ಟಿಟಿ ವಾವನಕ್ಕೆ ಡಿಕ್ಕಿಯಾಗಿದೆ.

ಅಪಘಾತದ ಭೀಕರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರಂತ ಅಂತ್ಯಕಂಡಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಪಕ್ಕದಲ್ಲಿ ಸಾಗುತ್ತಿದ್ದ ಬೈಕ್ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಗಳೂರು ಮೂಲದ ಸುನೀಲ್ ಮೃತ ದುರ್ದೈವಿ. ಮತ್ತೊಬ್ಬನ ಮೃತನ ಹೆಸರು ಇನ್ನೂ ಗೊತ್ತಾಗಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Related