ಡ್ರಗ್ಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ

ಡ್ರಗ್ಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಡ್ರಗ್ಸ್ ಮಾಫಿಯಾದ ಮಟ್ಟಹಾಕಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಡ್ರಗ್ಸ್ ಮಾಫಿಯಾದ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸರ್ಕಾರ ಮುಂದಾಗಿದ್ದು ಈ ವಿಚಾರವಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ತನಿಖೆಯ ಪ್ರಗತಿಯ ಕುರಿತಾಗಿ ಮಾಹಿತಿ ನೀಡಿದ್ದಾರೆ.

ಇನ್ನು ಪ್ರವಾಹ ಹಾನಿ ಸಮೀಕ್ಷೆ ನಡೆಸಲು ಕೇಂದ್ರದ ತಂಡ ಸೋಮವಾರ ರಾಜ್ಯಕ್ಕೆ ಆಗಮಿಸಲಿದ್ದು ಅವರ ಜೊತೆ ಸಭೆ ನಡೆಸಿ ಮಾಹಿತಿ ನೀಡಿ ಮಂಗಳವಾರ ಮೂರು ತಂಡಗಳಾಗಿ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಸಮೀಕ್ಷಾ ತಂಡ ಪ್ರವಾಸ ಮಾಡಲಿದೆ. ಬಳಿಕ ಸರ್ಕಾರದ ಮುಖ್ಯಕಾರ್ಯದರ್ಶಿಯ ಜೊತೆಗೆ ಸಭೆಯನ್ನು ನಡೆಸಲಿದ್ದಾರೆ. ಪ್ರವಾಹದಿಂದ ಆಗಿರುವ ನಷ್ಟದ ಕುರಿತಾಗಿ ಕೇಂದ್ರದ ಸಮೀಕ್ಷಾ ತಂಡಕ್ಕೆ ರಾಜ್ಯ ಸರ್ಕಾರ ಮಾಹಿತಿ ನೀಡಲಿದೆ ಎಂದರು.

Related