ಹುಬ್ಬಳ್ಳಿ : ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದನ್ನು ಖಂಡಿಸಿ, ವೇದಿಕೆ ಕಾರ್ಯಕರ್ತರು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ ಅವರ ವಾಹನಕ್ಕೆ ಅಡ್ಡಲಾಗಿ ಮಲಗಿ ಪ್ರತಿಭಟಿಸಿದರು.
ಸಚಿವರು ಇಲ್ಲಿನ ಕಿಮ್ಸ್ ನಲ್ಲಿ ಪ್ರಗತಿ ಪರಿಶೀಲನೆ ಸಭೆ ಮುಗಿಸಿ ಹೊರ ಬರುತ್ತಿದ್ದಾಗ ಕಪ್ಪುಪಟ್ಟಿ ಪ್ರದರ್ಶಿಸಿದ ಕಾರ್ಯಕರ್ತರು, ಸಚಿವರ ವಿರುದ್ಧ ಘೋಷಣೆ ಕೂಗಿದರು.
ತಕ್ಷಣವೇ ಮಧ್ಯಪ್ರವೇಶಿಸಿದ ಪೊಲೀಸರು, ಪ್ರತಿಭಟನಾಕಾ ರರನ್ನು ಸರಿಸಿ ಸಚಿವರ ಸಂಚಾರಕ್ಕೆ ದಾರಿ ಮಾಡಿ ಕೊಟ್ಟರು.