ʼತೆನೆʼ ಬಿಟ್ಟು ʼಕೈʼ ಹಿಡಿದ ಕಾರ್ಯಕರ್ತರು

ʼತೆನೆʼ ಬಿಟ್ಟು ʼಕೈʼ ಹಿಡಿದ ಕಾರ್ಯಕರ್ತರು

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲ ಮತ್ತು ಆಪರೇಷನ್ ಹಸ್ತ ಜೋರಾಗಿ ನಡೆಯುತ್ತಿದ್ದು ಇಂದು ಹಲವಾರು ಮುಖಂಡರು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದಾರೆ.

ಯಶವಂತಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸೋಮಶೇಖರ್ ರವರ ನೇತೃತ್ವದಲ್ಲಿ ನಡೆದ  ಉಲ್ಲಾಳು ವಾರ್ಡ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಬಾಗವಹಿಸಿ ಮಾತನಾಡಿದರು. ಇನ್ನು ಈಸಂದರ್ಭದಲ್ಲಿ ಹಲವಾರು ಜೆಡಿಎಸ್ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಪ್ರೊಫೆಸರ್ ಎಂ ವಿ ರಾಜೀವ್ ಗೌಡ, ಕಾಂಗ್ರೆಸ್ ಅಭ್ಯರ್ಥಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ, ಮಾಜಿ ಬ್ಲಾಕ್ ಅಧ್ಯಕ್ಷರಾದ ಅನಿಲ್ ಕುಮಾರ್, ಸತ್ಯನಾರಾಯಣ, ಬ್ಲಾಕ್ ಅಧ್ಯಕ್ಷರಾದ ರೇವಣ ಸಿದ್ದಪ್ಪ ನವರು ಹಾಗೂ ಹಲವಾರು ಮುಖಂಡರು ಉಪಸ್ಥಿತರಿದ್ದರು.

Related